Breaking news: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಉರುಳಿಬಿದ್ದ ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ!

Published : Aug 21, 2023, 07:47 AM ISTUpdated : Aug 21, 2023, 08:34 AM IST
Breaking news: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಉರುಳಿಬಿದ್ದ ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆ!

ಸಾರಾಂಶ

ನಿಯಂತ್ರಣ ಕಳೆದುಕೊಂಡ ಕೆಎಸ್‌ಆರ್‌ಟಿಸಿ ಬಸ್ ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿಯಾದ ಘಟನೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದಿದೆ.

ಕೊಡಗು (ಆ.21) : ನಿಯಂತ್ರಣ ಕಳೆದುಕೊಂಡ ಕೆಎಸ್‌ಆರ್‌ಟಿಸಿ ಬಸ್ ವೀರ ಸೇನಾನಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿಯಾದ ಘಟನೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದಿದೆ.

ಬಸ್ ಡಿಕ್ಕಿಯಾದ ರಭಸಕ್ಕೆ ನೆಲಕ್ಕೆ ಉರುಳಿಬಿದ್ದ ವೀರ ಸೇನಾನಿ ಪ್ರತಿಮೆ.ಮಡಿಕೇರಿ ಡಿಪೋದಿಂದ ಬಸ್‌ ನಿಲ್ದಾಣದ ಕಡೆ ಹೊರಟಿದ್ದ ಬಸ್. ಈ ಪಿಕಪ್ ವಾಹನ ಅಡ್ಡಿ. ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡಿರುವ ಚಾಲಕ ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿ ಹೊಡೆದು ನಿಂತ ಬಸ್. ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣಿಕರಿಲ್ಲದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕ ಹಾಗೂ ಕರ್ಯನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಬಸ್ ಚಾಲಕ ಕೊಟ್ರೇಶ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದ ಪೊಲೀಸರು. ಬಸ್ ಕೂಡ ಸಂಚಾರಿ ಪೊಲೀಸರ ವಶಕ್ಕೆ.

ಅಪಘಾತ: ಮಹಿಳೆ ದುರ್ಮರಣ

ಕಡೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಮಹೀಂದ್ರ ಪಿಕಪ್‌ ವಾಹನ ಗುದ್ದಿ ಮಹಿಳೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಮಾವುತನಳ್ಳಿಯ ಮಹಿಳೆ ಕಲ್ಲಮ್ಮ ಮೃತಪಟ್ಟವರು. ಕಲ್ಲಮ್ಮನ ಮಗ ಚಂದ್ರಶೇಖರ್‌ ಮತ್ತು ಲವ ಬೈಕಿನಲ್ಲಿ ಕಡೂರು ಕಡೆಯಿಂದ ಬಾಣಾವರ ರಸ್ತೆಯಿಂದ ಹೋಗುತ್ತಿರುವಾಗ ಬಿ.ಎಚ್‌ ರಸ್ತೆಯ ಲಿಂಗ್ಲಾಪುರ ಗೇಟಿನ ಬಳಿ ಹಿಂಬದಿಯಿಂದ ಬಂದ ಮಹೀಂದ್ರ ಪಿಕಪ್‌ ವಾಹನ ಬೈಕಿಗೆ ಗುದ್ದಿದ್ದು ಕಲ್ಲಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗ ಚಂದ್ರಶೇಖರ ಮತ್ತು ಕಲ್ಲಮ್ಮನ ತಂಗಿ ಮಗ ಲವ (11) ಗಂಭೀರ ಗಾಯಗೊಂಡಿದ್ದು, ಅವರನ್ನು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಮಹೇಂದ್ರ ಜೀಪಿನ ಚಾಲಕನ ಮೇಲೆ ಕಡೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ