
ಬೆಂಗಳೂರು (ಡಿ.19): ಸಾರಿಗೆ ನೌಕರರ ಮುಷ್ಕರದಿಂದ ನಾಲ್ಕು ದಿನ ಕೆಎಸ್ಆರ್ಟಿಸಿ ಬಸ್ ಸೇವೆ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರ ಕೋರಿಕೆ ಮೇರೆಗೆ ಮಾಸಿಕ ಬಸ್ ಪಾಸ್ ಮಾನ್ಯತೆಯನ್ನು ನಾಲ್ಕು ದಿನ ವಿಸ್ತರಿಸಲಾಗಿದೆ.
ಡಿ.11ರಿಂದ ಡಿ.14ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡಿದ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಸಿಕ ಬಸ್ ಪಾಸ್ ಪಡೆದಿರುವ ಪ್ರಯಾಣಿಕರು ನಾಲ್ಕು ದಿನಗಳ ಕಾಲ ಬಸ್ ಪಾಸ್ ವಿಸ್ತರಿಸುವಂತೆ ಮನವಿ ಮಾಡಿದ್ದರು.
ಸಾರಿಗೆ ಮುಷ್ಕರ ಅಂತ್ಯವಾಗಲು ನಿಜವಾದ ಕಾರಣ ಏನು? ಆ ಒಂದು ಬೇಡಿಕೆ!
ಈ ಮನವಿ ಪುರಸ್ಕರಿಸಿರುವ ಕೆಎಸ್ಆರ್ಟಿಸಿ, ಡಿಸೆಂಬರ್ ತಿಂಗಳ ಮಾಸಿಕ ಪಾಸ್ ಮಾನ್ಯತೆ ಮುಗಿದರೂ ಜನವರಿಯಲ್ಲಿ ನಾಲ್ಕು ದಿನಗಳ ಕಾಲ ಪಾಸ್ ಮಾನ್ಯ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ.
ಅಂತೆಯೆ ಮಾಸಿಕ ಪಾಸ್ ಹೊಂದಿರುವ ಪ್ರಯಾಣಿಕರು ಪಾಸು ವಿತರಣೆಗೆ ಕೌಂಟರ್ಗೆ ತೆರಳಿ ಪಾಸ್ನ ಚಾಲ್ತಿ ಅವಧಿ ನಾಲ್ಕು ದಿನಗಳಿಗೆ ವಿಸ್ತರಣೆಯಾಗಿರುವ ಬಗ್ಗೆ ದಿನಾಂಕ, ಸಹಿ ಹಾಗೂ ಮೊಹರನ್ನು ಹಾಕಿಸಿಕೊಳ್ಳುವಂತೆ ಕೋರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ