
ಬೆಂಗಳೂರು(ಸೆ.20): ಕೊರೋನಾ ಸೋಂಕು ಹರಡುವ ಭೀತಿಯಿಂದ ಸ್ಥಗಿತಗೊಂಡಿದ್ದ ಕೆಎಸ್ಆರ್ಟಿಸಿ ಬಸ್ ಸೇವೆ ಹಂತ ಹಂತವಾಗಿ ಪುನರಾರಂಭವಾಗುತ್ತಿದ್ದು, ಸೆ.22ರಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧ ನಗರಗಳಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗೆ ಮರು ಚಾಲನೆ ನೀಡಲಾಗುತ್ತಿದೆ.
ಬೆಂಗಳೂರು, ದಾವಣಗೆರೆ, ಮಂಗಳೂರು ಸೇರಿ ಇನ್ನಿತರ ಕಡೆಗಳಿಂದ ಮಹಾರಾಷ್ಟ್ರದ ಪ್ರಮುಖ ನಗರಗಳಿಗೆ ಬಸ್ಗಳು ಸಂಚರಿಸಲಿವೆ. ಬಸ್ ಪ್ರಯಾಣ ಮಾಡುವವರು ಕೆಎಸ್ಆರ್ಟಿಸಿ ವೆಬ್ಸೈಟ್ ಅಥವಾ ನಿಗಮದ ಪ್ರಾಂಚೈಸಿಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವುದು ಕಡ್ಡಾಯವಾಗಿದೆ.
ಕೊರೋನಾ ಕಾಟ: ಬಸ್ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಸಸ್ಪೆಂಡ್..!
ಜೊತೆಗೆ, ಕೊರೋನಾ ತಡೆಗಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕಿದೆ ಹಾಗೂ ಕರ್ನಾಟಕ ಮತ್ತು ಮಹಾರಾಷ್ಟ್ರ ಆರೋಗ್ಯ ಇಲಾಖೆ ಪ್ರಕಟಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ