ಡೀಸೆಲ್ ಖಾಲಿಯಾಗಿ ನಡುರಸ್ತೆಯಲ್ಲಿ ನಿಂತ KSRTC ಬಸ್; ಹಿಡಿಶಾಪ ಹಾಕಿದ ಪ್ರಯಾಣಿಕರು!

Published : May 23, 2024, 03:26 PM ISTUpdated : May 23, 2024, 03:33 PM IST
ಡೀಸೆಲ್ ಖಾಲಿಯಾಗಿ ನಡುರಸ್ತೆಯಲ್ಲಿ ನಿಂತ KSRTC ಬಸ್; ಹಿಡಿಶಾಪ ಹಾಕಿದ ಪ್ರಯಾಣಿಕರು!

ಸಾರಾಂಶ

ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡೀಸೆಲ್  ಖಾಲಿಯಾಗಿ ನಡುರಸ್ತೆಯಲ್ಲಿ ನಿಂತ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ.

ಹೊಸನಗರ (ಮೇ.23): ಬೆಂಗಳೂರಿನಿಂದ ಕುಂದಾಪುರಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಡೀಸೆಲ್ ಖಾಲಿಯಾಗಿ ನಡುರಸ್ತೆಯಲ್ಲಿ ನಿಂತ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ.

ಇದ್ದಕ್ಕಿದ್ದಂತೆ ಬಸ್ ನಡುರಸ್ತೆಯಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಮದುವೆಗೆ, ಆಸ್ಪ್ರೆಗೆ ಇನ್ನಿತರ ಕಾರ್ಯಗಳಿಗೆ ಹೊರಟಿದ್ದವರು ಸರಿಯಾದ ಸಮಯಕ್ಕೆ ತಲುಪಲಾಗದೆ ಚಡಪಡಿಸಿದ್ದು ಒಂದೆಡೆಯಾದರೆ, ಮಂಜುಮುಸುಕಿದ ವಾತಾವರಣದಲ್ಲಿ ಮಕ್ಕಳು ವೃದ್ಧರು ರಸ್ತೆಯಲ್ಲಿ ನಿಲ್ಲುವಂತಾಯಿತು. ಡಿಸೇಲ್ ವ್ಯವಸ್ಥೆ ಮಾಡದ ಸಾರಿಗೆ ನಿಗಮಕ್ಕೆ ಪ್ರಯಾಣಿಕರು ಹಿಡಿಶಾಪ ಹಾಕಿದರು. ಪ್ರಯಾಣಿಕರು ಮುಂದೆ ಪ್ರಯಾಣಿಸಲು ಟಿಕೆಟ್ ಹಣ ವಾಪಸ್ ನೀಡಿದರು. ಬಳಿಕ ಬೇರೊಂದು ಬಸ್‌ಗಳಿಗೆ ಪ್ರಯಾಣಿಕರು ತೆರಳಿದರು.

ಉಗುಳಲು ಹೋಗಿ ಬಸ್ ಕಿಟಕಿಯೊಳಗೆ ಗೃಹಲಕ್ಷ್ಮೀ ತಲೆ ಲಾಕ್, ಇದು ನಿನಗೆ ಬೇಕಿತ್ತಾ ಎಂದ ನೆಟ್ಟಿಗರು

ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ನದ್ದೇ ಈ ಗತಿಯಾದರೆ ಏನು ಎಂದು ಪ್ರಯಾಣಿಕರು ಪ್ರಶ್ನಿಸಿದರು ಈ ವೇಳೆ, ಬಸ್‌ ಕಂಡಕ್ಟರ್, ಡ್ರೈವರ್, 'ಏನು ಮಾಡೋದು ಸಾರ್, ನಮ್ಮ ಹಣದಿಂದಲೇ ಡಿಸೇಲ್ ಹಾಕಿಸಿಕೊಂಡು ಬರಬೇಕೆಂದು ಆದೇಶ ಬಂದಿದೆ' ಎಂದು. ಅಸಹಾಯಕತೆ ವ್ಯಕ್ತಪಡಿಸಿದರು. ಇದೇ ವೇಳೆ ಸ್ಥಳೀಯರು ಜಮಾಯಿಸಿ ಕಳೆದೊಂದು ತಿಂಗಳಿಂದ ಇದೇ ಕತೆಯಾಗಿದೆ. ಎಲ್ಲೆಂದರಡಲ್ಲೇ ಡಿಸೇಲ್ ಖಾಲಿಯಾಗಿ ನಡುರಸ್ತೆ ನಿಲ್ಲುತ್ತಿವೆ ಎಂದರು.

ಮೆಟ್ರೋ ರೈಲು ಹತ್ತುವ ರೀಲ್ಸ್ ಹುಚ್ಚಾಟದಲ್ಲಿ ಯುವತಿ ಮೊಬೈಲ್ ಪ್ಲಾಟ್‌ಫಾರ್ಮ್‌ನಲ್ಲೇ ಬಾಕಿ!

ಶಕ್ತಿ ಯೋಜನೆ ಜಾರಿಯಿಂದ ಸಾರಿಗೆ ಇಲಾಖೆ ಲಾಭದಲ್ಲಿದೆ ಎಂದು ಹೇಳುತ್ತಿರುವ ಸಾರಿಗೆ ಸಚಿವರ ಮಾತು ಸುಳ್ಳಾ? ಕಂಡಕ್ಟರ್, ಡ್ರೈವರ್ ತಮ್ಮ ಹಣದಿಂದಲೇ ಡಿಸೇಲ್ ತುಂಬಿಸಬೇಕ? ಅಷ್ಟೊಂದು ಪ್ರಯಾಣಿಕರು ಇಲ್ಲದಿದ್ರೆ ಡಿಸೇಲ್ ಹಣ ಎಲ್ಲಿ ಬರುತ್ತೆ ಸ್ವಾಮಿ? ಒಟ್ಟಿನಲ್ಲಿ ಮೊದಲೇ ನಷ್ಟದಲ್ಲಿದ್ದ ಸಾರಿಗೆ ಇಲಾಖೆ ಶಕ್ತಿಯೋಜನೆ ಬಳಿಕ ಇನ್ನಷ್ಟು ನಷ್ಟಕ್ಕೀಡಾಗಿದೆ ಎಂಬುದು ಇಂತಹ ಘಟನೆಗಳಿಂದ ಅನುಮಾನ ಮೂಡಿಸಿರುವುದು ಹೌದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್