
ಬೆಂಗಳೂರು, (ಜೂನ್.25): ಇಂದು (ಜೂನ್.25) ಸಂಜೆಯಿಂದ ಸೋಮವಾರ ಅಂದ್ರೆ ಜೂನ್ 27ರ ಬೆಳಗ್ಗೆ 5ಗಂಟೆ ವರೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ಮಾಡುತ್ತವೆಯೋ ಇಲ್ಲವೋ ಎನ್ನುವ ಗೊಂದಲದಲ್ಲಿ ಜನರು ಇದ್ದಾರೆ. ಇದೀಗ ಗೊಂದಲಕ್ಕೆ ಕೆಎಸ್ಆರ್ಟಿಸಿ ತೆರೆ ಎಳೆದಿದೆ.
ರಾಜ್ಯದಲ್ಲಿ 2 ಡೆಲ್ಟಾಪ್ಲಸ್ ಕೇಸ್ ಪತ್ತೆ, ಇಬ್ಬರೂ ಗುಣ
ಶನಿವಾರ ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ನಡುವೆಯೂ ಕೆಎಸ್ಆರ್ಟಿಸಿ ಬಸ್ ಸಂಚರಿಸಲಿವೆ. ಈ ಕುರಿತು ಕೆಎಸ್ಆರ್ಟಿಸಿ ಸಾಮಾಜಿ ಜಾಲತಾಣಗಳ ಮೂಕ ಪ್ರಯಾಣಿಕರಿಗೆ ತಿಳಿಸಿದೆ.
ನಾಳೆ ಮತ್ತು ನಾಡಿದ್ದು (ಶನಿವಾರ & ಭಾನುವಾರ) ವಾರಾಂತ್ಯ ಕರ್ಫ್ಯೂ ಇದ್ದಾಗ್ಯೂ ಸಹ ಕೆ ಎಸ್ ಆರ್ ಟಿ ಸಿ ಬಸ್ಸುಗಳ ಕಾರ್ಯಾಚರಣೆಯು ಇರಲಿದೆ. ಕರ್ಫ್ಯೂ ಸಮಯದಲ್ಲಿ ಬಹಳಷ್ಟು ಚಟುವಟಿಕೆಗಳು ನಿಷೇದಿಸಿರುವುದರಿಂದ ಅವಶ್ಯಕತೆಗೆ ತಕ್ಕಂತೆ ಮಾತ್ರ ಬಸ್ ಗಳು ಸಂಚರಿಸಲಿವೆ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ