ಲಾಕ್‌ಡೌನ್ 5.0: ಬಸ್‌ ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ

Published : Jun 01, 2020, 07:45 PM IST
ಲಾಕ್‌ಡೌನ್ 5.0: ಬಸ್‌ ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ

ಸಾರಾಂಶ

ಈಗಾಗಲೇ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ ಆರಂಭಿಸಲಾಗಿದ್ದು, ಇದೀಗ ಕೊಂಚ ಸಮಯದಲ್ಲೂ ಬದಲಾವಣೆ ಆಗಿದೆ.

ಬೆಂಗಳೂರು, (ಜೂನ್.01): ಕೇಂದ್ರ ಸರ್ಕಾರ ಜೂನ್ 30 ರ ವರೆಗೂ ದೇಶಾದ್ಯಂತ ಲಾಕ್‌ಡೌನ್ 5.0 ಘೋಷಿಸಿದ್ದು, ಹಲವು ವಿನಾಯಿತಿಗಳನ್ನು ಸಹ ನೀಡಿದೆ.

5ನೇ ಹಂತದ ಲಾಕ್‌ಡೌನ್‌ನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರ್ಫ್ಯೂ ಅವಧಿಯನ್ನು ಕಡಿತಗೊಳಿಸಿದ್ದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್‌ಆರ್‌ಟಿಸಿ) ಸಂಚಾರದ ವೇಳಾಪಟ್ಟಿಯಲ್ಲಿ ಕೂಡ ಬದಲಾವಣೆ ಮಾಡಲಾಗಿದೆ.

ಸರ್ಪ್ರೈಸ್ ನೀಡಿದ ರಚಿತಾ, ರಾಜ್ಯದಲ್ಲಿ ಎಣ್ಣೆಗೆ ಬೇಡಿಕೆ ಕುಸಿತ ; ಜೂ.01ರ ಟಾಪ್ 10 ಸುದ್ದಿ!

 ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ಕಾರ್ಯಾಚರಣೆಯಲ್ಲಿರುತ್ತವೆ. ರಾಜ್ಯದಲ್ಲಿ ಕೆಎಸ್‌ಆರ್ಟಿಸಿ ಮತ್ತು ಉಳಿದ ಸಾರಿಗೆ ಬಸ್ ಗಳು ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆಯವರೆಗೆ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದೆ. ಸಮಯ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಕೂಡ ತನ್ನ ಸಂಚಾರದಲ್ಲೂ ಬದಲಾವಣೆ ಮಾಡಿದೆ. ಈ ಹಿಂದೆ ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಬಸ್ ಸಂಚಾರ ಮಾಡುತ್ತಿದ್ದವು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ