ಬಳ್ಳಾರಿ ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್‌ಸ್ಪೆಕ್ಟರ್ ಅನುಮಾನಾಸ್ಪದ ಸಾವು

Published : Aug 07, 2023, 08:49 AM IST
ಬಳ್ಳಾರಿ ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್‌ಸ್ಪೆಕ್ಟರ್ ಅನುಮಾನಾಸ್ಪದ ಸಾವು

ಸಾರಾಂಶ

ಜಿಲ್ಲೆಯ ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯೂರಿಟಿ ಇನ್ಸ್ ಪೆಕ್ಟರ್ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಕೇಂದ್ರ ಕಾರಾಗೃಹದ ಬಳಿ ನಡೆದಿದೆ

ಬಳ್ಳಾರಿ (ಆ.7): ಜಿಲ್ಲೆಯ ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯೂರಿಟಿ ಇನ್ಸ್ ಪೆಕ್ಟರ್ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಕೇಂದ್ರ ಕಾರಾಗೃಹದ ಬಳಿ ನಡೆದಿದೆ

ಹುಸೇನಪ್ಪ(54) ಸಾವಿಗಿಡಾದ ಸೆಕ್ಯೂರಿಟಿ ಇನ್ಸ್ ಪೆಕ್ಟರ್. ಕಳೆದ 20 ವರ್ಷಗಳಿಂದ ಕರ್ತವ್ಯ ನರ್ವಹಿಸುತ್ತಿದ್ದ ಹುಸೇನಪ್ಪ.  ಚಾಲಕರ ನೇಮಕಾತಿ ಪರೀಕ್ಷೆ ಹಿನ್ನೆಲೆ‌  ಬಳ್ಳಾರಿಯಿಂದ ಬೀದರ್ ಗೆ ತೆರಳಲು ತಮ್ಮ ನಿವಾಸದಿಂದ ಬೈಕ್ ನಲ್ಲಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ದುರಂತ. ಅಪಘಾತವಾಯಿತಾ ಕೊಲೆಯಾಯಿತಾ ನಿಗೂಢವಾಗಿ ಉಳಿದಿದೆ. ಕೇಂದ್ರ ಕಾರಾಗೃಹದ ಬಳಿ ಬೈಕ್ ಹಾಗೂ ಹುಸೇನಪ್ಪನ ಮೃತದೇಹ ರಾತ್ರಿ ಪತ್ತೆಯಾಗಿದೆ. ತಲೆಯಲ್ಲಿ ಗಾಯಗಳಾಗಿ ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಸಾವು.

ಕೊಲೆ ಎಂದು ಸ್ಥಳೀಯರ ಆರೋಪ

ಇದು ಅಪಘಾತ ಅಲ್ಲ ಕೊಲೆ ಎನ್ನುತ್ತಿರುವ ಸ್ಥಳೀಯರು. ಯಾರೋ  ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಘಟನೆ ಸ್ಥಳಕ್ಕೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು, ಕೆಎಸ್ಆರ್‌ಟಿಸಿ ಡಿಸಿ  ದೇವರಾಜ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿ ನಗರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!