
ಬೆಂಗಳೂರು (ಫೆ.27): ಕೊರೋನಾ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಚಾಲನಾ ಸಿಬ್ಬಂದಿಗೆ ಈ ಹಿಂದೆ ಸ್ಥಗಿತಗೊಳಿಸಿದ್ದ ದಿನ ಭತ್ಯೆ ಹಾಗೂ ಬಾಟಾವನ್ನು ಫೆ.1ರಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ.
ಈ ಹಿಂದೆ ಕೊರೋನಾ ಹಿನ್ನೆಲೆಯಲ್ಲಿ ಆದಾಯ ಕುಸಿತವಾಗಿ ನಿಗಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಖರ್ಚು-ವೆಚ್ಚಗಳಿಗೆ ಕಡಿವಾಣ ಹಾಕಲು ಚಾಲನಾ ಸಿಬ್ಬಂದಿಗೆ ನೀಡುತ್ತಿದ್ದ ದಿನ ಭತ್ಯೆ ಹಾಗೂ ಬಾಟಾವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.
"ನಮ್ಮ ಕಾರ್ಗೋ” ಸೇವೆ ಲೋಕಾರ್ಪಣೆಗೊಳಿಸಿದ ಸಿಎಂ ಯಡಿಯೂರಪ್ಪ
ಇದಕ್ಕೆ ಸಾರಿಗೆ ನೌಕರರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಆರ್ಥಿಕ ಇಲಾಖೆ ಅಭಿಪ್ರಾಯ ಮೇರೆಗೆ ನಿಗಮದ ಸ್ವಂತ ಸಂಪನ್ಮೂಲದಿಂದ ಈ ಭತ್ಯೆ ಹಾಗೂ ಬಾಟಾ ಭರಿಸಲು ನಿಗಮ ನಿರ್ಧರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ