7 ಬೇಡಿಕೆ ಈಡೇರಿಕೆಗೆ ಆಗ್ರಹ: ಡಿ.31ರಿಂದ ಬಸ್ ಮುಷ್ಕರ?

Published : Dec 10, 2024, 09:00 AM ISTUpdated : Dec 10, 2024, 09:01 AM IST
7 ಬೇಡಿಕೆ ಈಡೇರಿಕೆಗೆ ಆಗ್ರಹ: ಡಿ.31ರಿಂದ ಬಸ್ ಮುಷ್ಕರ?

ಸಾರಾಂಶ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಮುಷ್ಕರದ ನೋಟಿಸ್ ಸಲ್ಲಿಸಲಾಗಿದೆ.

ಬೆಂಗಳೂರು: ವೇತನ ಮತ್ತು ಭತ್ಯೆಗಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಈ ಕುರಿತು ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕ ರದ ನೋಟಿಸ್ ಅನ್ನು ಸಲ್ಲಿಸಲಾಗಿದೆ. 

ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ಸಮಾವೇಶಗಳು, ಪ್ರತಿಭಟನೆಗಳು, ಮನವಿಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಕುರಿತು ಚರ್ಚಿಸಲು ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಕೆಟ್ ದರ ಪರಿಷ್ಕರಣೆ ಆಗದ ಹೊರತು ವೇತನ ಪರಿಷ್ಕರಣೆ ಕಷ್ಟ ಸಾಧ್ಯ ಎಂದು ಆಡಳಿತ ವರ್ಗ ಹೇಳಿದೆ. ಈ ವಿಳಂಬ ಧೋರಣೆಯಿಂದ ಸಾರಿಗೆ ನೌಕರರು ಬೇಸರಗೊಂಡು ಅನಿವಾರ್ಯವಾಗಿ ಶಾಂತಿಯುತ ಮುಷ್ಕರದ ನಿರ್ಧಾರ ಕೈ ಗೊಂಡಿದ್ದಾರೆ. ಡಿ.31ರ ನಂತರ ಬೇಡಿಕೆ ಈಡೇರುವವರೆಗೆ ಕರ್ತವ್ಯಕ್ಕೆ ಹಾಜರಾ ಗುವುದಿಲ್ಲ ಎಂದು ಸಮಿತಿ ತಿಳಿಸಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆಯಿಂದ 5,000 ಹೆಕ್ಟೇರ್ ಮುಳುಗಡೆ: ಪರ್ಯಾಯ ಭೂಮಿ ಗುರುತು

ಸಾರಿಗೆ ನೌಕರರ ಬೇಡಿಕೆಗಳು ಏನು? 

  1. ಹಿಂದಿನ ವೇತನ ಹೆಚ್ಚಳದ 38 ತಿಂಗಳ ಬಾಕಿ ಬಿಡುಗಡೆ. 
  2. ಮೂಲ ವೇತನಕ್ಕೆ ಶೇ.25ರಷ್ಟು ವೇತನ ಹೆಚ್ಚಿಸಿ, ಶೇ.31ರಷ್ಟು ತುಟ್ಟಿಭತ್ಯೆ ವಿಲೀನಗೊಳಿಸಿ ವೇತನ ಶ್ರೇಣಿ ಸಿದ್ಧಪಡಿಸಬೇಕು. 
  3. ನೌಕರರ ಭತ್ಯೆಗಳನ್ನು 5 ಪಟ್ಟು ಹೆಚ್ಚಿಸಬೇಕು. ಪ್ರತಿ ತಿಂಗಳು 2,000 ರು. ವೈದ್ಯಕೀಯ ಚಿಕಿತ್ಸಾ ವೆಚ್ಚ ನೀಡಬೇಕು. 
  4. ಬಸ್ ನಿಲ್ದಾಣ, ಘಟಕಗಳಲ್ಲಿ ಸೂಕ್ತ ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. 
  5. ಶಕ್ತಿ ಯೋಜನೆಯಿಂದ ಆಗುತ್ತಿರುವ ಶಿಕ್ಷೆ, ಕಿರುಕುಳ ಸಮಸ್ಯೆ ಪರಿಹರಿಸಬೇಕು. 
  6. ನೌಕರರ ಮುಂಬಡ್ತಿಗೆ ಕ್ರಮ ಕೈಗೊಳ್ಳಬೇಕು. 
  7. ಹೆಚ್ಚುವರಿ ಕೆಲಸದ ಅವಧಿಗೆ ಒಟಿ ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳು

ಇದನ್ನೂ ಓದಿ: ಬೆಂಗಳೂರಿನ 227 ರಸ್ತೆಗಳ ಟ್ರಾಫಿಕ್ ನಿಯಂತ್ರಣಕ್ಕೆ BBMP ಸೂಪರ್ ಪ್ಲಾನ್; 337 ಕಿ.ಮೀ ಇನ್ನು ಆರಾಮಾದಾಯಕ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್