
ಬೆಂಗಳೂರು: ವೇತನ ಮತ್ತು ಭತ್ಯೆಗಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಈ ಕುರಿತು ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಷ್ಕ ರದ ನೋಟಿಸ್ ಅನ್ನು ಸಲ್ಲಿಸಲಾಗಿದೆ.
ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ಸಮಾವೇಶಗಳು, ಪ್ರತಿಭಟನೆಗಳು, ಮನವಿಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಕುರಿತು ಚರ್ಚಿಸಲು ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟಿಕೆಟ್ ದರ ಪರಿಷ್ಕರಣೆ ಆಗದ ಹೊರತು ವೇತನ ಪರಿಷ್ಕರಣೆ ಕಷ್ಟ ಸಾಧ್ಯ ಎಂದು ಆಡಳಿತ ವರ್ಗ ಹೇಳಿದೆ. ಈ ವಿಳಂಬ ಧೋರಣೆಯಿಂದ ಸಾರಿಗೆ ನೌಕರರು ಬೇಸರಗೊಂಡು ಅನಿವಾರ್ಯವಾಗಿ ಶಾಂತಿಯುತ ಮುಷ್ಕರದ ನಿರ್ಧಾರ ಕೈ ಗೊಂಡಿದ್ದಾರೆ. ಡಿ.31ರ ನಂತರ ಬೇಡಿಕೆ ಈಡೇರುವವರೆಗೆ ಕರ್ತವ್ಯಕ್ಕೆ ಹಾಜರಾ ಗುವುದಿಲ್ಲ ಎಂದು ಸಮಿತಿ ತಿಳಿಸಿದೆ.
ಇದನ್ನೂ ಓದಿ: ಮೇಕೆದಾಟು ಯೋಜನೆಯಿಂದ 5,000 ಹೆಕ್ಟೇರ್ ಮುಳುಗಡೆ: ಪರ್ಯಾಯ ಭೂಮಿ ಗುರುತು
ಸಾರಿಗೆ ನೌಕರರ ಬೇಡಿಕೆಗಳು ಏನು?
ಇದನ್ನೂ ಓದಿ: ಬೆಂಗಳೂರಿನ 227 ರಸ್ತೆಗಳ ಟ್ರಾಫಿಕ್ ನಿಯಂತ್ರಣಕ್ಕೆ BBMP ಸೂಪರ್ ಪ್ಲಾನ್; 337 ಕಿ.ಮೀ ಇನ್ನು ಆರಾಮಾದಾಯಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ