ಬೇಡಿಕೆ ಈಡೇರಿಸಲು ಭರವಸೆ: ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆ ವಾಪಸ್

Published : Oct 01, 2023, 09:32 AM IST
ಬೇಡಿಕೆ ಈಡೇರಿಸಲು ಭರವಸೆ:  ಕೆಎಸ್‌ಆರ್‌ಟಿಸಿ ನೌಕರರ ಪ್ರತಿಭಟನೆ ವಾಪಸ್

ಸಾರಾಂಶ

ಕೆಎಸ್ಆರ್‌ಟಿಸಿ ಎಂಡಿ ಅನ್ಬುಕುಮಾರ್ ಅವರು, ನೌಕರರ ಬೇಡಿಕೆಗಳನ್ನ ಆಲಿಸಿ ಪ್ರತಿಭಟನೆ ಕೈಬಿಡಿ ನಿಮ್ಮ ಬೇಡಿಕೆಗಳನ್ನ ಈಡೇರಿಸಲಾಗುವುದು. ಮತ್ತೊಮ್ಮೆ ಸಚಿವರ ಜೊತೆ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನ ಹಿಂಪಡೆಯಲಾಗಿದೆ. 

ಬೆಂಗಳೂರು(ಅ.01):  ಬೇಡಿಕೆಗಳನ್ನ ಈಡೇರಿಸುವುದಾಗಿ ಭರಸೆ ನೀಡಿದ ಹಿನ್ನಲೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ ವಾಪಸ್ ಪಡೆಯಲಾಗಿದೆ. ಹೌದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಟೋಬರ್ 5 ರಂದು ಪ್ರತಿಭಟನೆಗೆ ರಾಜ್ಯ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕರೆ ನೀಡಿತ್ತು. 

ಈ ಕುರಿತು ನೌಕರರ ಮುಖಂಡರ ಜೊತೆ ಸಭೆ ನಡೆಸಿದ ಕೆಎಸ್ಆರ್‌ಟಿಸಿ ಎಂಡಿ ಅನ್ಬುಕುಮಾರ್ ಅವರು, ನೌಕರರ ಬೇಡಿಕೆಗಳನ್ನ ಆಲಿಸಿ ಪ್ರತಿಭಟನೆ ಕೈಬಿಡಿ ನಿಮ್ಮ ಬೇಡಿಕೆಗಳನ್ನ ಈಡೇರಿಸಲಾಗುವುದು. ಮತ್ತೊಮ್ಮೆ ಸಚಿವರ ಜೊತೆ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನ ಹಿಂಪಡೆಯಲಾಗಿದೆ. 

ಶಕ್ತಿ ಯೋಜನೆಗೆ 100 ದಿನದ ಸಂಭ್ರಮ: 62 ಕೋಟಿ ಮಹಿಳಾ ಪ್ರಯಾಣಕ್ಕೆ ಖರ್ಚಾದ ಹಣವೆಷ್ಟು ಗೊತ್ತಾ?

ಸಾರಿಗೆ ನೌಕರರ ಬೇಡಿಕೆಗಳೇನು?

* ಪ್ರತಿಭಟನೆ ಸಂದರ್ಭದಲ್ಲಿ ಅಮಾನತು ಮಾಡಲಾಗಿರುವ ನೌಕರರನ್ನ ವಾಪಸ್ ಕರ್ತವ್ಯಕ್ಕೆ ತೆಗೆದುಕೊಳ್ಳಬೇಕು
* ನಿಗಮದಲ್ಲಿ ಸಿಬ್ಬಂದಿ ಕೊರತೆ ಇದೆ, ಈ ಕೂಡಲೇ ಭರ್ತಿ ಮಾಡಿಬೇಕು
* ಜಿಪಿಪಿ ಮಾದರಿಯಲ್ಲಿ ಬಸ್ ಖರೀದಿ ಮಾಡಬಾರದು(ಬಸ್ ಮತ್ತು ಚಾಲಕ ಖಾಸಗಿಯವರದ್ದಯ, ನಿರ್ವಾಹಕ ಮಾತ್ರ ನಿಗಮದವರು)
* ಬಸ್ ಮಾತ್ರ ಖರೀದಿಸಬೇಕು, ನಿರ್ವಾಹಕ ಮತ್ತು ಚಾಲಕ ನಿಗಮದವರೇ ಆಗಿರಬೇಕು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ