ಏಪ್ರಿಲ್ 7 ರಿಂದ KSRTC ಬಸ್ ಸೇವೆ ಬಂದ್ : ಹಿಂದೆಯೇ ಕಾರ್ಯತಂತ್ರ

Kannadaprabha News   | Asianet News
Published : Mar 24, 2021, 10:47 AM IST
ಏಪ್ರಿಲ್ 7 ರಿಂದ KSRTC ಬಸ್ ಸೇವೆ ಬಂದ್ : ಹಿಂದೆಯೇ ಕಾರ್ಯತಂತ್ರ

ಸಾರಾಂಶ

ರಾಜ್ಯದಲ್ಲಿ ಏಪ್ರಿಲ್ 7 ರಿಂದ ಕೆಎಸ್‌ಆರ್‌ಟಿಸಿ ಬಸ್ ಸೇವೆ ಬಹುತೇಕ ಬಂದ್ ಆಗುವ ಸಾಧ್ಯತೆ ಇದೆ.  ನೌಕರರು ಅನಿರ್ಧಿಷ್ಟಾವದಿ ಮುಷ್ಕರ ನಡೆಸಲು ತೀರ್ಮಾನಿಸಿದ್ದು ಈ ನಿಟ್ಟಿನಲ್ಲಿ ಇದನ್ನು ತಡೆಯುವ ಕಾರ್ಯತಂತ್ರವೂ ನಡೆಯುತ್ತಿದೆ.  

 ಬೆಂಗಳೂರು (ಮಾ.24):  ಸಾರಿಗೆ ನೌಕರ ಕೂಟ ಏ.7ರಂದು ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಈ ಮುಷ್ಕರ ವಿಫಲಗೊಳಿಸುವ ನಿಟ್ಟಿನಲ್ಲಿ ಕಾರ್ಯ ತಂತ್ರ ಹೆಣೆಯಲು ಮುಂದಾಗಿವೆ.

ಸಾರಿಗೆ ನೌಕರ ಕೂಟದ ಮುಖಂಡರು ಡಿಪೋಗಳಿಗೆ ಭೇಟಿ ನೀಡಿ ನೌಕರರೊಂದಿಗೆ ಸಭೆ ನಡೆಸಿ ಮುಷ್ಕರಕ್ಕೆ ಬೆಂಬಲ ಸೂಚಿಸುವಂತೆ ಮನವಿ ಮಾಡುತ್ತಿದ್ದಾರೆ. ಹೀಗಾಗಿ ಇನ್ನು ಮುಂದೆ ಡಿಪೋ ಒಳಗಡೆ ಕಾರ್ಮಿಕರ ಚಟುವಟಿಕೆಗಳಿಗೆ ಅವಕಾಶ ನೀಡದೆ ಮುಷ್ಕರ ವಿಫಲಗೊಳಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಕಾರ್ಮಿಕ ಮುಖಂಡರ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ.

ಏ.7ರಿಂದ ರಸ್ತೆಗಿಳಿಯಲ್ಲ KSRTC ಬಸ್‌ಗಳು : ಪ್ರಯಾಣಿಕರೆ ಎಚ್ಚರ ...

ಈ ನಿಟ್ಟಿನಲ್ಲಿ ಡಿಪೋಗಳ ಎಲ್ಲ ಭದ್ರತಾ ಸಿಬ್ಬಂದಿ ಸದಾ ಜಾಗೃತರಾಗಿ ಕಾರ್ಯ ನಿರ್ವಹಿಸಬೇಕು. ಸಾಧ್ಯವಾದಷ್ಟೂಡಿಪೋಗಳ ಮುಖ್ಯದ್ವಾರದ ಬಾಗಿಲು ಮುಚ್ಚಿರಬೇಕು. ಡಿಪೋಗಳಿಗೆ ಯಾರೇ ಬಂದರೂ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಮತ್ತು ಮೇಲಾಧಿಕಾರಿಗಳ ಆದೇಶದಂತೆ ಕಾರ್ಯ ನಿರ್ವಹಿಸಬೇಕು. ಎಲ್ಲಾ ಘಟನೆ ಅಥವಾ ಚಟುವಟಿಕೆಗಳ ಬಗ್ಗೆ ವಿಡಿಯೊ ಚಿತ್ರೀಕರಣ ಮಾಡಬೇಕು. ಯಾವುದೇ ಕಾರಣಕ್ಕೂ ಕಾರ್ಮಿಕ ಮುಖಂಡರ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ