
ಬೆಂಗಳೂರು (ನ.12 ) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ತನ್ನ ನೌಕರರಿಗೆ 2017- 18 ನೇ ಸಾಲಿನ ಬೋನಸ್ ನೀಡಲು ಮುಂದಾಗಿದೆ. ನಿಗಮದ ಅರ್ಹ ನೌಕರರಿಗೆ ನ. 20ರೊಳಗೆ ತಲಾ 7 ಸಾವಿರ ರು. ಬೋನಸ್ ಸಿಗುತ್ತಿದೆ.
ಈ ಬೋನಸ್ ಮೊತ್ತವನ್ನು ನೌಕರರಿಗೆ ಪಾವತಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ನಿಗಮದ ಮುಖ್ಯ ಲೆಕ್ಕಾಧಿಕಾರಿಗೆ ಸೂಚಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮೂಲವೇತನ ಹಾಗೂ ತುಟ್ಟಿಭತ್ಯೆ ಸೇರಿ 21 ಸಾವಿರ ರು. ಕ್ಕಿಂತ ಕಡಿಮೆ ವೇತನ ಪಡೆಯುವ ನೌಕರರು ಈ ಬೋನಸ್ ಪಡೆಯಲು ಅರ್ಹರಾಗಿದ್ದಾರೆ.
ಅಂದರೆ, ಅಧಿಕಾರಿ ವರ್ಗ ಹೊರತುಪಡಿಸಿ ಚಾಲಕರು, ನಿರ್ವಾಹಕರು, ಮೆಕ್ಯಾನಿಕ್ ಗಳು ಈ ಬೋನಸ್ ಲಾಭ ಪಡೆಯಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ