ಕೆಎಸ್‌ಆರ್‌ಟಿಸಿ ಮೊದಲ ಎಲೆಕ್ಟ್ರಿಕ್‌ ಬಸ್‌ ಸಂಚಾರ ಶೀಘ್ರ

Published : Oct 12, 2022, 09:31 AM IST
ಕೆಎಸ್‌ಆರ್‌ಟಿಸಿ ಮೊದಲ ಎಲೆಕ್ಟ್ರಿಕ್‌ ಬಸ್‌ ಸಂಚಾರ ಶೀಘ್ರ

ಸಾರಾಂಶ

ನಿಗಮಕ್ಕೆ 350 ಇ-ಬಸ್‌ ಖರೀದಿಗೆ ಒಪ್ಪಂದ, ಅ.15ರವೇಳೆಗೆ ಪ್ರಾಯೋಗಿಕ ಸಂಚಾರ, ಸರ್ಕಾರಿ ಬಸ್‌ಗಳಲ್ಲಿ ಇ-ಟಿಕೆಟ್‌ ಜಾರಿಗೆ ಚಿಂತನೆ: ಚಂದ್ರಪ್ಪ

ಮಂಗಳೂರು(ಅ.12):  ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿಗಾಗಿ ಒಟ್ಟು 350 ಎಲೆಕ್ಟ್ರಿಕ್‌ ಬಸ್‌(ಇ-ಬಸ್‌) ಖರೀದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಅ.15ರ ವೇಳೆಗೆ ಮೊದಲ ಇ-ಬಸ್‌ ಪ್ರಾಯೋಗಿಕ ಸಂಚಾರ ನಡೆಸಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ. ಬೆಂಗಳೂರಿನಿಂದ ಮೈಸೂರು, ಶಿವಮೊಗ್ಗ, ಮಡಿಕೇರಿ, ದಾವಣಗೆರೆಗೆ ಪ್ರಯೋಗಿಕವಾಗಿ ಎಲೆಕ್ಟ್ರಿಕ್‌ ಬಸ್‌ ಸಂಚರಿಸುವ ಸಾಧ್ಯತೆ ಇದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ ಕಾರಣಕ್ಕೆ ಕಳೆದೆರಡು ವರ್ಷ ಯಾವುದೇ ಹೊಸ ಬಸ್‌ಗಳ ಖರೀದಿ ಸಾಧ್ಯವಾಗಲಿಲ್ಲ. 650 ಹೊಸ ಬಸ್‌ಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗೆ ಒಪ್ಪಿಗೆ ನೀಡುವ ನಿರೀಕ್ಷೆ ಇದೆ ಎಂದರು.

ಪ್ರಸ್ತುತ ಖರೀದಿಸುವ ಇ-ಬಸ್‌ಗಳು ಅತ್ಯಾಧುನಿಕ ಮಾದರಿಯದ್ದಾಗಿದ್ದು, ಮೊದಲ ಹಂತದಲ್ಲಿ 50 ಇ-ಬಸ್‌ ಆಗಮಿಸಲಿದೆ. ಭವಿಷ್ಯದಲ್ಲಿ ಡೀಸೆಲ್‌, ಪೆಟ್ರೋಲ್‌ ಬದಲು ಇ-ಬಸ್‌ಗಳ ಓಡಾಟ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

Electric Buses in Karnataka: 2030ಕ್ಕೆ ಎಲ್ಲ ಸರ್ಕಾರಿ ಬಸ್‌ ಎಲೆಕ್ಟ್ರಿಕ್‌: ಸಚಿವ ರಾಮುಲು

ಇ-ಟಿಕೆಟ್‌ಗೆ ಯೋಚನೆ: ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇ-ಟಿಕೆಟ್‌ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಈಗಾಗಲೇ ಕೆಲ ಖಾಸಗಿ ಬಸ್‌ಗಳಲ್ಲಿ ಇ-ಟಿಕೆಟ್‌ ಸೌಲಭ್ಯ ಗಮನಕ್ಕೆ ಬಂದಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇಟಿಎಂ ಮಿಷನ್‌ ಮೂಲಕ ಇ-ಟಿಕೆಟ್‌ ಯೋಜನೆ ಕಾರ್ಯಗತಗೊಳಿಸಲು ಯೋಚಿಸಲಾಗುವುದು. ಇಂಧನ ಬೆಲೆ ಏರಿಕೆಯಾದರೂ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಯಾಣ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ ಎಂದರು.
ಒಂದೇ ದಿನ .22.56 ಕೋಟಿ: ಕೆಎಸ್‌ಆರ್‌ಟಿಸಿ ಸೋಮವಾರ ಒಂದೇ ದಿನದಲ್ಲಿ .22.56 ಕೋಟಿ ಗರಿಷ್ಠ ಲಾಭ ಗಳಿಸಿದೆ. ಕಳೆದ ಎರಡು ವರ್ಷದ ಇತಿಹಾಸದಲ್ಲಿ ದಿನವೊಂದರ ದಾಖಲೆಯ ಗಳಿಕೆ ಇದು. ಬಾಕಿ ದಿನಗಳಲ್ಲಿ ಸರಾಸರಿ .12 ಕೋಟಿ ಆದಾಯ ಬರುತ್ತಿದೆ ಎಂದರು.

ಕರಾವಳಿಯಲ್ಲಿ ಪ್ಯಾಕೆಜ್‌ ಟೂರ್‌

ಕರಾವಳಿಯಲ್ಲಿ ವಾರಾಂತ್ಯ ಹಾಗೂ ಹಬ್ಬದ ದಿನಗಳಲ್ಲಿ ಪ್ಯಾಕೆಜ್‌ ಟೂರ್‌ ಆಯೋಜಿಸುವ ಬಗ್ಗೆ ಕೆಎಸ್‌ಆರ್‌ಟಿಸಿ ವಿಭಾಗೀಯ ಅಧಿಕಾರಿಗಳಿಗೆ ಅಧ್ಯಕ್ಷ ಚಂದ್ರಪ್ಪ ಒಪ್ಪಿಗೆ ಸೂಚಿಸಿದರು. ಅ.21ರಿಂದ 27ರ ವರೆಗೆ ದೀಪಾವಳಿ ಟೂರ್‌ ಪ್ಯಾಕೇಜ್‌ ಮಾಡಲಾಗುವುದು. ಮಂಗಳೂರು, ಉಡುಪಿ ಹಾಗೂ ಕುಂದಾಪುರ ವಿಭಾಗದಲ್ಲಿ ದೇವಸ್ಥಾನಗಳಿಗೆ ಒಂದೇ ದಿನದಲ್ಲಿ ಬಂದುಹೋಗುವ ಪ್ಯಾಕೆಜ್‌ ಹಮ್ಮಿಕೊಳ್ಳಲಾಗುವುದು. ವಾರಾಂತ್ಯದಲ್ಲೂ ವಿಶೇಷ ಟೂರ್‌ ಪ್ಯಾಕೆಜ್‌ ಒದಗಿಸಲಾಗುವುದು. 2 ದಿನಗಳ ದೇವಸ್ಥಾನ ಟೂರ್‌ಗೂ ಅವಕಾಶ ಕಲ್ಪಿಸಲಾಗುವುದು ಎಂದು ಚಂದ್ರಪ್ಪ ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ