
ಬೆಂಗಳೂರು (ಆ.04): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಪ್ರಮುಖ ಅಂತಾರಾಜ್ಯ ಮಾರ್ಗದಲ್ಲಿ ಹೊಸ ಬಸ್ ಸೇವೆಯನ್ನು ಆರಂಭಿಸಿದೆ. ಬೆಂಗಳೂರಿನಿಂದ ಕೇರಳದ ಪ್ರಸಿದ್ಧ ನಗರವಾದ ಕಣ್ಣೂರಿಗೆ (Kannur) ಹೊಸ 'ನಾನ್ ಎ.ಸಿ ಸ್ಲೀಪರ್' (Non-AC Sleeper) ಬಸ್ ಕಾರ್ಯಾಚರಣೆಯನ್ನು 2026ರ ಆಗಸ್ಟ್ 07 ರಿಂದ ಆರಂಭಿಸಲು ಸಾರಿಗೆ ನಿಗಮ ನಿರ್ಧರಿಸಿದೆ.
ಕೆಎಸ್ಆರ್ಟಿಸಿಯ ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಈ ನೂತನ ಸೇವೆಯನ್ನು ಒದಗಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲಿ ಸುಖಕರ ಹಾಗೂ ಆರಾಮದಾಯಕ ಪ್ರಯಾಣ ಬಯಸುವ ಪ್ರಯಾಣಿಕರಿಗೆ ಇದು ಉತ್ತಮ ಅವಕಾಶವಾಗಿದೆ.
ಈ ನೂತನ ಸ್ಲೀಪರ್ ಬಸ್ ಬೆಂಗಳೂರಿನ ಮಡಿವಾಳದಿಂದ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಮಡಿವಾಳದಿಂದ ಹೊರಟು ಶಾಂತಿನಗರ ಬಸ್ ನಿಲ್ದಾಣ (TTMC), ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಕೆಂಗೇರಿ ಬಸ್ ನಿಲ್ದಾಣಗಳ ಮೂಲಕ ನಗರದ ಪ್ರಯಾಣಿಕರನ್ನು ಹತ್ತಿಸಿಕೊಂಡು ಮುನ್ನಡೆಯಲಿದೆ. ತದನಂತರ ಮೈಸೂರು, ಹುಣಸೂರು, ಗೋಣಿಕೊಪ್ಪ, ವಿರಾಜಪೇಟೆ, ಇರಿಟ್ಟಿ ಮತ್ತು ತಲಶ್ಶೇರಿ (ತಲಚೇರಿ) ಮಾರ್ಗವಾಗಿ ಕಣ್ಣೂರು ತಲುಪಲಿದೆ. ಪ್ರಮುಖವಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಕೇರಳದ ಗಡಿ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ, ಉದ್ಯೋಗಿಗಳಿಗೆ ಮತ್ತು ಪ್ರವಾಸಿಗರಿಗೆ ಈ ಬಸ್ ಸೇವೆ ಅತ್ಯಂತ ಅನುಕೂಲಕರವಾಗಲಿದೆ.
ಬೆಂಗಳೂರಿನಿಂದ ಕಣ್ಣೂರಿಗೆ ತೆರಳುವ ಪ್ರತಿಯೊಬ್ಬ ಪ್ರಯಾಣಿಕನಿಗೆ ಪ್ರಯಾಣ ದರವನ್ನು ರೂ. 850/- ಎಂದು ನಿಗದಿಪಡಿಸಲಾಗಿದೆ. ಮಾರ್ಗಮಧ್ಯದ ವಿವಿಧ ನಿಲ್ದಾಣಗಳ ನಿರ್ಗಮನ ಸಮಯ, ತಲುಪುವ ಸ್ಥಳ ಹಾಗೂ ಟಿಕೆಟ್ ದರದ ವಿವರ ಈ ಕೆಳಗಿನಂತಿದೆ:
ಖಾಸಗಿ ಬಸ್ಗಳ ದುಬಾರಿ ಪ್ರಯಾಣ ದರಕ್ಕೆ ಹೋಲಿಸಿದರೆ ಕೆಎಸ್ಆರ್ಟಿಸಿ ಅತ್ಯಂತ ಕೈಗೆಟುಕುವ ದರದಲ್ಲಿ ಸುರಕ್ಷಿತ ಹಾಗೂ ಸುಖಕರ ಪ್ರಯಾಣವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರು ಹಾಗೂ ಪ್ರವಾಸಿಗರು ಕೆಎಸ್ಆರ್ಟಿಸಿಯ ಅಧಿಕೃತ ವೆಬ್ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿ ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಬೆಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ