220 ಕೋಟಿ ರು. ಸಾಲಕ್ಕೆ KSRTC ಹುಡುಕಾಟ..!

Kannadaprabha News   | Asianet News
Published : Feb 12, 2021, 09:04 AM IST
220 ಕೋಟಿ ರು. ಸಾಲಕ್ಕೆ KSRTC ಹುಡುಕಾಟ..!

ಸಾರಾಂಶ

ಕಮ್ಮಿ ಬಡ್ಡಿಯ ಬ್ಯಾಂಕುಗಳಿಂದ ಟೆಂಡರ್‌ ಆಹ್ವಾನ| ನಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು| ಸಾಲ ನೀಡುವುದಕ್ಕಾಗಿ ಕೆಲ ಷರತ್ತು ವಿಧಿಸಿದ ಕೆಎಸ್‌ಆರ್‌ಟಿಸಿ|  

ಬೆಂಗಳೂರು(ಫೆ.12): ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸಾಲದ ಮೊರೆ ಹೋಗಲು ಮುಂದಾಗಿವೆ. ಕಳೆದೆರಡು ತಿಂಗಳ ಹಿಂದೆ ಬಿಎಂಟಿಸಿ ಸಾಲ ಪಡೆದ ಬೆನ್ನಲ್ಲೇ ಇದೀಗ ಕೆಎಸ್‌ಆರ್‌ಟಿಸಿ ಸಹ 220 ಕೋಟಿ ರು. ಸಾಲ ಪಡೆಯಲು ಮುಂದಾಗಿದೆ.

ಡೀಸೆಲ್‌ ಬೆಲೆ ಏರಿಕೆ, ಸಿಬ್ಬಂದಿ ವೇತನ ಹೆಚ್ಚಳ, ಕೊರೋನಾ ಸೋಂಕಿನ ಕಾರಣದಿಂದ ಪ್ರಯಾಣಿಕರ ಕೊರತೆ ಸೇರಿ ಇನ್ನಿತರ ಕಾರಣಗಳಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು ನಷ್ಟದಲ್ಲಿವೆ. ಇದನ್ನು ಸರಿಪಡಿಸಲು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಬ್ಯಾಂಕ್‌ಗಳಿಗಾಗಿ ಟೆಂಡರ್‌ ಆಹ್ವಾನಿಸುತ್ತಿವೆ.

ಕಳೆದ ಎರಡು ತಿಂಗಳ ಹಿಂದೆ ಆರ್ಥಿಕ ಸಂಕಷ್ಟದಿಂದ ಹೊರಬರಲು ಬಿಎಂಟಿಸಿ 230 ಕೋಟಿ ರು. ಸಾಲ ಪಡೆಯಲು ಟೆಂಡರ್‌ ಆಹ್ವಾನಿಸಿತ್ತು. ಅದಕ್ಕಾಗಿ ಬಿಎಂಟಿಸಿ ಒಡೆತನದ ಬಸ್ಸುಗಳು, ಭೂಮಿ ಮತ್ತು ಕಟ್ಟಡಗಳನ್ನು ಅಡಮಾನ ಇಡುವ ಬಗ್ಗೆಯೂ ತಿಳಿಸಿತ್ತು. ಇದೀಗ ಕೆಎಸ್ಸಾರ್ಟಿಸಿ ಕೂಡ ಸಾಲ ಪಡೆಯಲು ಮುಂದಾಗಿದ್ದು, ಒಟ್ಟು 220 ಕೋಟಿ ರು. ಸಾಲ ಪಡೆಯುತ್ತಿದೆ. ಅದರಂತೆ ಸಾಲ ನೀಡುವ ಬ್ಯಾಂಕ್‌ಗಾಗಿ ಹುಡುಕಾಟ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹದಗೆಟ್ಟ ಆರ್ಥಿಕ ಸ್ಥಿತಿ: ಸಾಲಕ್ಕಾಗಿ ಬಸ್‌ ನಿಲ್ದಾಣವನ್ನೇ ಅಡವಿಟ್ಟ ಬಿಎಂಟಿಸಿ..!

ಸಾಲ ನೀಡಲು ಷರತ್ತು:

ಸಾಲ ನೀಡುವುದಕ್ಕಾಗಿ ಕೆಲ ಷರತ್ತು ವಿಧಿಸಲಾಗಿದ್ದು, ಒಂದೇ ಕಂತಿನಲ್ಲಿ 220 ಕೋಟಿ ರು. ಸಾಲ ನೀಡಬೇಕು. ಸಾಲದ ಮರುಪಾವತಿ ಅವಧಿ ಏಳು ವರ್ಷಕ್ಕೆ ನಿಗದಿ ಮಾಡಬೇಕು ಹಾಗೂ ಸಾಲ ಮರುಪಾವತಿ ಆರು ತಿಂಗಳ ಮೊರಟೋರಿಯಂ ನಂತರ ಪ್ರಾರಂಭವಾಗುತ್ತದೆ ಎಂದು ಟೆಂಡರ್‌ ದಾಖಲೆಯಲ್ಲಿ ತಿಳಿಸಲಾಗಿದೆ.

ನಷ್ಟದ ವಿವರ (2020ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ)

ನಿಗಮ ನಷ್ಟ(ಕೋಟಿ ರು.ಗಳಲ್ಲಿ)

ಕೆಎಸ್ಸಾರ್ಟಿಸಿ 829.74
ಬಿಎಂಟಿಸಿ 696.67
ವಾಯುವ್ಯ 587.77
ಈಶಾನ್ಯ 452.33
ಒಟ್ಟು 2,566.71
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ