ಕೇಂದ್ರಕ್ಕೆ ಕೆಎಸ್ಸಾರ್ಟಿಸಿಯಿಂದ ಪತ್ರ

Published : Nov 29, 2019, 08:56 AM IST
ಕೇಂದ್ರಕ್ಕೆ ಕೆಎಸ್ಸಾರ್ಟಿಸಿಯಿಂದ ಪತ್ರ

ಸಾರಾಂಶ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಏಕ ಮಾದರಿ ಟೋಲ್‌ ವಸೂಲಿಗೆ ಡಿ.1ರಿಂದ ಕಡ್ಡಾಯಗೊಳಿಸಿರುವ ‘ಫಾಸ್ಟ್‌ ಟ್ಯಾಗ್‌’ ಅಳವಡಿಕೆಗೆ ಸಮಯಾವಕಾಶ ನೀಡುವಂತೆ ಕೇಂದ್ರಕ್ಕೆ KSRTCಯಿಂದ ಪತ್ರ ಬರೆಯಲಾಗಿದೆ. 

ಬೆಂಗಳೂರು [ನ.29]:   ಕೇಂದ್ರ ಸರ್ಕಾರ ದೇಶದೆಲ್ಲೆಡೆ ಎಲ್ಲಾ ರೀತಿಯ ವಾಹನಗಳಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಏಕ ಮಾದರಿ ಟೋಲ್‌ ವಸೂಲಿಗೆ ಡಿ.1ರಿಂದ ಕಡ್ಡಾಯಗೊಳಿಸಿರುವ ‘ಫಾಸ್ಟ್‌ ಟ್ಯಾಗ್‌’ ಅಳವಡಿಕೆಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಕನಿಷ್ಠ ಮೂರು ತಿಂಗಳ ಕಾಲಾವಕಾಶ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದಿವೆ.

ಕೆಎಸ್‌ಆರ್‌ಟಿಸಿಯ ಸುಮಾರು ನಾಲ್ಕು ಸಾವಿರ ಬಸ್‌ಗಳು ಪ್ರತಿ ದಿನ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ ಸೇರಿದಂತೆ ಏಳು ರಾಜ್ಯಗಳ 81 ಟೋಲ್‌ ಪ್ಲಾಜಾಗಳಲ್ಲಿ ಸಂಚರಿಸುತ್ತವೆ. ಇದರಿಂದ ಪ್ರತಿ ತಿಂಗಳು ಸುಮಾರು ಆರು ಕೋಟಿ ರು. ಟೋಲ್‌ ಶುಲ್ಕ ಪಾವತಿಸಲಾಗುತ್ತಿದೆ. ಫಾಸ್ಟ್‌ ಟ್ಯಾಗ್‌ ಅಳವಡಿಕೆಗೆ ನಮ್ಮ ವಿರೋಧವಿಲ್ಲ. ಆದರೆ, ಈ ವ್ಯವಸ್ಥೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳಿದ್ದು, ಅವುಗಳನ್ನು ನಿವಾರಿಸಿ ಬಳಿಕ ವ್ಯವಸ್ಥಿತವಾಗಿ ಜಾರಿಗೊಳಿಸಬೇಕು. 

ನಾಲ್ಕು ಸಾವಿರ ಬಸ್‌ಗಳಿಗೆ ಡಿ.1ರೊಳಗೆ ಅಳವಡಿಸುವುದು ಸುಲಭದ ಮಾತಲ್ಲ. ಹಾಗಾಗಿ ಮೂರು ತಿಂಗಳು ಕಾಲಾವಕಾಶ ಕೋರಿ ವಾರದ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ಪ್ರತಿಕ್ರಿಯೆಗೆ ಎದುರು ನೋಡುತ್ತಿದ್ದೇವೆ ಎಂದು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯ ಹಾಗೂ ಹೊರಾಜ್ಯಗಳಿಗೆ ಸೇವೆ ನೀಡುವ ಕೆಎಸ್‌ಆರ್‌ಟಿಯು 2017ರಲ್ಲೇ ನಿಗಮದ ಐದು ಸಾವಿರ ಬಸ್‌ಗಳಿಗೆ ಫಾಸ್ಟ್‌ ಟ್ಯಾಗ್‌ ಅಳವಡಿಕೆ ಮಾಡಿತ್ತು. ಈ ವೇಳೆ ಕೆಲ ಟೋಲ್‌ ಪ್ಲಾಜಾದಲ್ಲಿ ಬಸ್‌ ಹೋದರೆ ಫಾಸ್ಟ್‌ ಟ್ಯಾಗ್‌ ಖಾತೆಯಿಂದ ಎರಡು, ಮೂರು ಬಾರಿ ಹಣ ಕಡಿತವಾಗುತ್ತಿತ್ತು. ಪ್ರತಿ ದಿನ ಇಂತಹ ಸಮಸ್ಯೆಗಳು ಹೆಚ್ಚಾದ್ದರಿಂದ ನಿರ್ವಹಿಸುವುದು ಕಷ್ಟವಾಗಿತ್ತು. ಹಾಗಾಗಿ ಈ ಫಾಸ್ಟ್‌ ಟ್ಯಾಗ್‌ ಕೈಬಿಡಲಾಗಿತ್ತು. ಈಗ ಇಡೀ ದೇಶಕ್ಕೆ ಅನ್ವಯವಾಗುವಂತೆ ಫಾಸ್ಟ್‌ ಟ್ಯಾಗ್‌ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತಿದೆ. ಹಾಗಾಗಿ ಅನಿವಾರ್ಯವಾಗಿ ನಿಗಮದ ಬಸ್‌ಗಳಿಗೂ ಅಳವಡಿಸಿಕೊಳ್ಳಬೇಕು. ಆದರೆ, ಸಮಯಾವಕಾಶದ ಕೊರತೆಯಿಂದ ಮೂರು ತಿಂಗಳು ಕಾಲಾವಕಾಶ ನೀಡುವಂತೆ ಕೋರಲಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ