ನಿವೃತ್ತರ ನೌಕರರಿಗೆ ಸಂತಸದ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ..!

Published : Jun 29, 2024, 11:56 AM ISTUpdated : Jun 29, 2024, 12:13 PM IST
ನಿವೃತ್ತರ ನೌಕರರಿಗೆ ಸಂತಸದ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ..!

ಸಾರಾಂಶ

ಈ ವರ್ಷದ ಸೆ. 30ರೊಳಗೆ 38 ತಿಂಗಳ ಅವಧಿಯಲ್ಲಿ ನಿವೃತ್ತರಾದ ನೌಕರರ ಪಟ್ಟಿ, ಅವರಿಗೆ ಪಾವತಿಸಬೇಕಾದ ವೇತನ ಹೆಚ್ಚಳದ ಹಿಂಬಾಕಿಯ ಮೊತ್ತದ ಪಟ್ಟಿ ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.   

ಬೆಂಗಳೂರು(ಜೂ.29):  ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನಿವೃತ್ತ ನೌಕರರ ಹಲವು ದಿನಗಳ ಬೇಡಿಕೆ ಈಡೇರಿಸಲು ನಿಗಮಗಳು ಮುಂದಾಗಿದ್ದು, ನಿವೃತ್ತ ನೌಕರರಿಗೆ ಬಾಕಿ ಇರುವ ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಆದೇಶಿಸಲಾಗಿದೆ. 

ಸಾರಿಗೆ ನೌಕರರಿಗೆ 2020ರ ಜ.1ರಿಂದ ಶೇ.15ರಷ್ಟು ವೇತನ ಪರಿಷ್ಕರಣೆ ಮಾಡಲಾಗಿದೆ. ಆದರೆ, 2023ರ ಮಾ. 1ರ ನಂತರ ವೇತನ ಪರಿಷ್ಕರಣೆ ಮೊತ್ತ ಪಾವತಿಸಬೇಕಿದೆ. ಉಳಿದಂತೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಪಾವತಿಯಾಗಿರಲಿಲ್ಲ. ಈ ಅವಧಿಯಲ್ಲಿ ನೂರಾರು ನೌಕರರು ನಿವೃತ್ತರಾಗಿದ್ದು, ಅವರಿಗೂ ಹಿಂಬಾಕಿ ಪಾವತಿಸಬೇಕಿತ್ತು. ಇದೀಗ ಹಾಲಿ ಕರ್ತವ್ಯದಲ್ಲಿರುವ ನೌಕರರನ್ನು ಹೊರತುಪಡಿಸಿ 2020ರ ಜ. 1ರಿಂದ 2023ರ ಫೆ. 28ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, 2024-25ನೇ ಸಾಲಿನ ಆರ್ಥಿಕ ವರ್ಷದ ಅಂತ್ಯದೊಳಗೆ ವೇತನ ಹೆಚ್ಚಳದ ಹಿಂಬಾಕಿ ಪಾವತಿಸುವ ಕುರಿತು ಎಲ್ಲ ನಾಲ್ಕೂ ನಿಗಮಗಳ ಪರವಾಗಿ ಕೆಎಸ್ಸಾರ್ಟಿಸಿ ಆದೇಶಿಸಿದೆ. 

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಬಸ್ ಪ್ರಯಾಣ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಅಲ್ಲದೆ, ಈ ವರ್ಷದ ಸೆ. 30ರೊಳಗೆ 38 ತಿಂಗಳ ಅವಧಿಯಲ್ಲಿ ನಿವೃತ್ತರಾದ ನೌಕರರ ಪಟ್ಟಿ, ಅವರಿಗೆ ಪಾವತಿಸಬೇಕಾದ ವೇತನ ಹೆಚ್ಚಳದ ಹಿಂಬಾಕಿಯ ಮೊತ್ತದ ಪಟ್ಟಿ ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಕ್ರಮದಿಂದಾಗಿ ನಿವೃತ್ತ ನೌಕರರು 2019ರ ಡಿ. 31 ರವರೆಗೆ ಪಡೆಯುತ್ತಿದ್ದ ಮೂಲ ವೇತನದಲ್ಲಿ ಶೇ. 15ರಷ್ಟು ಹೆಚ್ಚಳವಾಗಲಿದೆ. ಈ ಕ್ರಮದಿಂದಾಗಿ ನಾಲ್ಕೂ ಸಾರಿಗೆ ನಿಗಮಗಳಿಗೆ 220 ಕೋಟಿ ರು. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ