ಬಸ್‌ನಲ್ಲಿ ಸಹ ಪ್ರಯಾಣಿಕರಿಗೆ ಕಿರಿಕಿರಿಯಾಗುವಂತೆ ಮೊಬೈಲ್‌ ಬಳಸುವಂತಿಲ್ಲ: KSRTC ಆದೇಶ

Published : Nov 12, 2021, 05:55 PM IST
ಬಸ್‌ನಲ್ಲಿ ಸಹ ಪ್ರಯಾಣಿಕರಿಗೆ ಕಿರಿಕಿರಿಯಾಗುವಂತೆ ಮೊಬೈಲ್‌ ಬಳಸುವಂತಿಲ್ಲ: KSRTC ಆದೇಶ

ಸಾರಾಂಶ

* ಸರ್ಕಾರಿ ಬಸ್‌ಗಳಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ದಂಡ  *ಸಹ ಪ್ರಯಾಣಿಕರಿಗೆ ಕಿರಿಯಾಗುವಂತೆ  ಗಟ್ಟಿಯಾಗಿ ಮಾತನಾಡುವುದು ನಿಷೇಧ * ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ

ಬೆಂಗಳೂರು, (ನ.12): ಸರ್ಕಾರಿ ಬಸ್‌ನಲ್ಲಿ (Government Bus) ಪ್ರಯಾಣಿಸುವ ವೇಳೆ ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ. ಬಸ್ ಪ್ರಯಾಣದ ವೇಳೆ ಮೊಬೈಲ್‌ನಲ್ಲಿ (Mobile) ಜೋರಾಗಿ ಮಾತನಾಡಿ ಕಿರಿಕಿರಿ ಉಂಟು ಮಾಡುವುದಕ್ಕೆ ಬ್ರೇಕ್ ಬಿದ್ದಿದೆ.

ಹೌದು... ಸರ್ಕಾರಿ ಬಸ್ ಪ್ರಯಾಣದ (Bus Travelling) ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (Karnataka State Road Transport Corporation) ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.

ಬೆಂಗ್ಳೂರಿಂದ 6 ನಗರಕ್ಕೆ ಎಲೆಕ್ಟ್ರಿಕ್‌ ಬಸ್‌ ಸಂಚಾರ

ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಇದು ಕಾನೂನು ಬಾಹಿರವಾಗಿರುವುದರಿಂದ ಬಸ್‌ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಬ್ದಮಾಲಿನ್ಯ ಉಂಟಾಗುವದರ ಜೊತೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ ಹಲವು ದೂರಗಳ ಹಿನ್ನೆಲೆ, ಕೆಎಸ್‌ಆರ್ಟಿಸಿ ಈ ಬಗ್ಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ.

ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯ ಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು ಎಂದು ಆದೇಶಲ್ಲಿ ಉಲ್ಲೇಖಿಸಲಾಗಿದೆ.

ಬಸ್‌ನಲ್ಲಿ ಪ್ರಯಾಣಿಕರಿಗೆ ಮೊಬೈಲ್‌ ತಲೆನೋವು ತಪ್ಪಿಸಲು ಹಾಗೂ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕಲು ಹೈಕೋರ್ಟ್‌ ಸೂಚನೆ ಮೇರೆಗೆ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಇತ್ತೀಚಿನ ದಿನಗಳಲ್ಲಿ ಜನ ಮೊಬೈಲ್‌ಗೆ ಹೆಚ್ಚು ಅವಲಂಬಿತರಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರ ಕಡೆಗೆ ಗಮನ ಕೊಡದೆ ತಮ್ಮಿಷ್ಟದಂತೆ ಜೋರಾಗಿ ಹಾಡು, ಸಿನಿಮಾ, ವಾರ್ತೆ ಮೊದಲಾದ ಆಡಿಯೋ ಅಥವಾ ವಿಡಿಯೋಗಳನ್ನು ಜೋರಾಗಿ ಹಾಕುವುದು ಸರ್ವೇ ಸಾಮಾನ್ಯವಾಗಿದೆ.

ತುಮಕೂರಿನ ವಕೀಲನಿಂದ ಪಿಐಎಲ್‌
ಬಸ್‌ನಲ್ಲಿ ಮೊಬೈಲ್ ಕಿರಿಕಿರಿ ತಪ್ಪಿಸುವಂತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಿಸುವಂತೆ ತುಮಕೂರಿನ ವಕೀಲ ರಮೇಶ್‌ ನಾಯಕ್‌ ಎಲ್‌. ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿತ್ತು. ಇದರ ಅನ್ವಯ ಇಲಾಖೆಯು ಎಲ್ಲಾ ಸಾರಿಗೆ ನಿಗಮಗಳಿಗೆ ಕಟ್ಟುನಿಟ್ಟಿನ ಕ್ರಮ ಅನುಷ್ಠಾನಕ್ಕೆ ಖಡಕ್‌ ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!