ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023 ಸ್ವೀಕರಿಸಿದ KSRTC

Published : Aug 17, 2023, 03:21 PM ISTUpdated : Aug 17, 2023, 05:23 PM IST
ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023 ಸ್ವೀಕರಿಸಿದ KSRTC

ಸಾರಾಂಶ

ಕೆಎಸ್‌ಆರ್‌ಟಿಸಿ ಸಂಸ್ಥೆಯು ಸಿಂಗಾಪುರದ ಸಂಸ್ಥೆಯಿಂದ ಕೊಡಲಾಗುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ ಪ್ರಶಸ್ತಿ ಪಡೆದುಕೊಂಡಿದೆ.

ಬೆಂಗಳೂರು (ಆ.17):  ಶಕ್ತಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತ ಸಂಸ್ಥೆಯು ಸಿಂಗಾಪುರದ ಸಂಸ್ಥೆಯಿಂದ ಕೊಡಲಾಗುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಸಿಂಗಾಪುರದಲ್ಲಿ ಗುರುವಾರ ನಡೆದ ಸುಸ್ಥಿರ ಜಾಗತಿಕ ಸಮಾವೇಶದಲ್ಲಿ (World Sustainability Congress) ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಂಗಾಪುರ ವಿಶ್ವ ಸುಸ್ಥಿರತೆ ಕಾಂಗ್ರೆಸ್‌ನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್  2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆಯ್ಕೆಯಾಗಿತ್ತು. ಕೆಎಸ್‌ಆರ್‌ಟಿಸಿ ಸಂಸ್ಥೆಯು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. 

ನಟ ಉಪೇಂದ್ರನಿಗೆ ಬಿಗ್‌ ರಿಲೀಫ್‌: ಹಲಸೂರು ಗೇಟ್‌ ಠಾಣೆಯ ಎಫ್‌ಐಆರ್‌ಗೂ ತಡೆಕೊಟ್ಟ ಹೈಕೋರ್ಟ್‌

ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ವಿಲ್ಬರ್ ಎನ್.ಜಿ., ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಪೈಡ್ ಪ್ರೋಫೆಶನಲ್ ಅಕೌಂಟೆಂಟ್ಸ್ ಹಾಗೂ ಅಟಾರ್ನಿ, ಕರೀನ ಲೆನೋರ್ ಎಸ್. ಬಯೋನ್,  ಚೀಫ್ ಎನ್ವೈರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್  ಅಫೀಸರ್,  ಕಂಪ್ಲಯನ್ಸ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿಹಗಳು ಪ್ರಶಸ್ತಿ ಪ್ರದಾನ ಮಾಡಿದರು. ಇನ್ನು ಕೆಎಸ್‌ಆರ್‌ಟಿಸಿ ನಿಗಮದ ಪರವಾಗಿ ಶ್ರೀಮತಿ ಮಂಜುಳ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು ಹಾಗೂ ಡಾ. ಲತಾ ಟಿ.ಎಸ್. ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಜಂಟಿಯಾಗಿ ಪ್ರಶಸ್ತಿ ಸ್ವೀಕರಿಸಿದರು.

ಹಳೆಯ ಬಸ್‌ಗಳಿಗೆ ನವೀಕರಣ ರೂಪ ಕೊಟ್ಟ ಕೆಎಸ್‌ಆರ್‌ಟಿಸಿ: ರಾಜ್ಯದಲ್ಲಿ 10 ಲಕ್ಷ ಕಿಲೋ ಮೀಟರ್ ಸಂಚರಿಸಿದ 8,100 ಬಸ್​​​ಗಳಿವೆ. ಆದರೆ, ಕೇಂದ್ರ ಸರ್ಕಾರದಿಂದ 15 ವರ್ಷಗಳವರೆಗೆ ಬಸ್‌ಗಳನ್ನು ಬಳಕೆ ಮಾಡಬಹುದು ಎಂಬ ನಿಯಮವಿದೆ. 1000 ಬಸ್​ಗಳನ್ನು ನವೀಕರಿಸಲಾಗುತ್ತಿದೆ. ಬಸ್​​ನಲ್ಲಿ ತುಕ್ಕು ಹಿಡಿದ ಭಾಗಗಳನ್ನು ತೆಗೆದು ಹೊಸ ಭಾಗಗಳನ್ನು ಜೋಡಿಸಿ ಬಸ್​ಗೆ ಹೊಸ ಟಚ್ ನೀಡಲಾಗುತ್ತಿದೆ.  ಕೆಎಸ್ಆರ್​ಟಿಸಿಯು ಹಳೆ ಬಸ್​​ಗಳನ್ನು ನವೀಕರಿಸಿ ರಸ್ತೆಗಿಳಿಸುವ ಯೋಜನೆಯನ್ನು ಕೈಗೊಂಡಿದೆ. ಹೊಸ ಬಸ್ ಕೊಳ್ಳುವುದರ ಜತೆಗೆ ಬದಲಾಗಿ ಹಳೆ ಬಸ್​​ಗಳನ್ನೇ ನವೀಕರಿಸಿ ಓಡಿಸುವುದರಿಂದ ಹಣ ಉಳಿತಾಯವಾಗಲಿದೆ ಎಂಬ ಯೋಚನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ.

ನಂದಿನಿ ಉತ್ಪನ್ನ ಪ್ರಿಯರಿಗೆ ಗುಡ್ ನ್ಯೂಸ್: ನಂದಿನಿ ಸ್ವೀಟ್ಸ್‌ ಮೇಲೆ ಶೇ.20 ರಿಯಾಯಿತಿ

ಸಾರಿಗೆ ಇಲಾಖೆಯ ಶಕ್ತಿ ಯೋಜನೆ ಯಶಸ್ವಿ:  ಇನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗಿಳಿಸಿದೆ. ಇದರಿಂದ ಸರ್ಕಾರಿ ಬಸ್​​ಗಳ ಬಳಕೆಯು ಹೆಚ್ಚಾಗಿದ್ದು, ಮಹಿಳೆಯರಿಗೆ ಉಚಿತ ಸೇವೆಯನ್ನು ನೀಡುವಲ್ಲಿಯೂ ಸಹಾಯಕ ಆಗಿದೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಹಲವಾರು ತೀರ್ಥ ಕ್ಷೇತ್ರಗಳಿಗೆ ತೆರಳುವ ಬಸ್​​​ಗಳಲ್ಲಿ ಸಂಚರಿಸುವ ಮಹಿಳೆಯರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಕರ್ನಾಟಕ ಸಾರಿಗೆ ಸಂಸ್ಥೆಯು ಪರಿಸರಸ್ನೇಹಿ ಬಸ್​ಗಳಿಗೂ ಸಾಕಷ್ಟು ಒತ್ತು ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಬಯೋ-ಡೀಸೆಲ್ ಆಧಾರಿತ ಬಸ್​ಗಳು ಸಂಚರಿಸುತ್ತಿವೆ. ಬೆಂಗಳೂರು ಮೈಸೂರು ರಸ್ತೆಯಲ್ಲಿ ವಿದ್ಯುತ್‌ ಬ್ಯಾಟರಿ ಚಾಲಿತ ಬಸ್​​ಗಳು ಸಹ ಸಂಚಾರ ಮಾಡುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ