ದೀಪಾವಳಿಗೆ : KSRTC ಪ್ರಯಾಣಿಕರಿಗಿಲ್ಲಿದೆ ಗುಡ್ ನ್ಯೂಸ್

Kannadaprabha News   | Asianet News
Published : Nov 01, 2021, 08:47 AM ISTUpdated : Nov 01, 2021, 09:43 AM IST
ದೀಪಾವಳಿಗೆ : KSRTC ಪ್ರಯಾಣಿಕರಿಗಿಲ್ಲಿದೆ ಗುಡ್ ನ್ಯೂಸ್

ಸಾರಾಂಶ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ರಾಜಧಾನಿ ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳು ಹಾಗೂ ಹೊರ ರಾಜ್ಯದ ಹಲವು ನಗರಗಳಿಗೆ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚುವರಿಯಾಗಿ 1000 ಬಸ್‌

 ಬೆಂಗಳೂರು (ನ.01):  ದೀಪಾವಳಿ (Deepavali) ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರು (Bengaluru) ನಗರದಿಂದ ರಾಜ್ಯದ ವಿವಿಧ ಭಾಗಗಳು ಹಾಗೂ ಹೊರ ರಾಜ್ಯದ ಹಲವು ನಗರಗಳಿಗೆ ಕೆಎಸ್‌ಆರ್‌ಟಿಸಿ (KSRTC) ವತಿಯಿಂದ ಹೆಚ್ಚುವರಿಯಾಗಿ 1000 ಬಸ್‌ಗಳ (Bus) ಕಾರ್ಯಚರಣೆ ನಡೆಸಲಾಗುತ್ತಿದೆ.

ಧರ್ಮಸ್ಥಳ (Dharmasthala), ಕುಕ್ಕೆ ಸುಬ್ರಹ್ಮಣ್ಯ (Kukke Subramanya), ಶಿವಮೊಗ್ಗ (shivamogga), ಹಾಸನ (Hassan), ಮಂಗಳೂರು (Mangaluru), ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು (Mysuru), ಮಡಿಕೇರಿ, ದಾವಣಗೆರೆ (Davanagere), ಹುಬ್ಬಳ್ಳಿ, ಧಾರವಾಡ, ಬೆಳಗಾವಿ (Belagavi), ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ಅಲ್ಲದೆ, ಹೊರ ರಾಜ್ಯದ ನಗರಗಳಾದ ತಿರುಪತಿ (Tirupathi), ವಿಜಯವಾಡ (Vijayawada), ಹೈದರಾಬಾದ್‌, ತಿರುವನಂತಪುರ, ಕೊಟ್ಟಾಯಂ, ಚೆನ್ನೈ (chennai), ಕೊಯಮತ್ತೂರು, ಪೂನಾ, ಪಣಜಿ ಸೇರಿದಂತೆ ವಿವಿಧ ಭಾಗಗಳಿಗೆ ಅ.29 ರಿಂದ ನ.7ರ ವರೆಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಹೆಚ್ಚುವರಿ ವಿಶೇಷ ಸಾರಿಗೆಗಳ ಪ್ರಯಾಣ ದರಗಳಲ್ಲಿ ಹೆಚ್ಚಳ ಇರುವುದಿಲ್ಲ. ಕೆಎಸ್‌ಆರ್‌ಟಿಸಿ ನಿಗಮದ ವೆಬ್‌ಸೈಟ್‌ ಹಾಗೂ ಕರ್ನಾಟಕ ಮತ್ತು ಅತರ ರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್‌ ಕೌಂಟರ್‌ಗಳ ಮುಖಾಂತರ ಈ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಹುಬ್ಬಳ್ಳಿಯಿಂದಲೂ ಹೆಚ್ಚುವರಿ ಬಸ್

 

ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ (Kannada rajyotsava), 3 ಮತ್ತು 5ರಂದು ದೀಪಾವಳಿ (Deepavali) ಹಬ್ಬ, 7 ಭಾನುವಾರದ ರಜೆ ಇರುವ ಪ್ರಯುಕ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (NWKRTC) ವಿಶೇಷ ಹೆಚ್ಚುವರಿ ಸಾರಿಗೆ ಬಸ್‌ (Bus) ಕಾರ್ಯಾಚರಣೆ ಮಾಡಲಿವೆ.

ದೀಪಾವಳಿ ಹಬ್ಬಕ್ಕೆ ಬಂದು ಹೋಗುವ ಪ್ರಯಾಣಿಕರ (Passengers) ಅನುಕೂಲಕ್ಕಾಗಿ ಅ. 30 ಮತ್ತು 31ರಂದು ಬೆಂಗಳೂರು (Bengaluru), ಮಂಗಳೂರು (Mangaluru), ಹೈದರಾಬಾದ್‌, ಪಣಜಿ, ಪುಣೆ, ಮುಂಬೈ ಮತ್ತು ಇನ್ನಿತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಸ್ವಂತ ಊರುಗಳಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ (Hubli), ಧಾರವಾಡ, ಗದಗ, ಬೆಳಗಾವಿ (Belagavi), ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ (Bagalakote) ವಿಭಾಗಗಳಿಂದ ಒಟ್ಟು 600ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಕಾಗದ ರಹಿತ ವ್ಯವಸ್ಥೆಗೆ ಸಾರಿಗೆ ಇಲಾಖೆ ಸಿದ್ಧತೆ: ಸಚಿವ ರಾಮುಲು

ಹಬ್ಬ ಮುಗಿದ ನಂತರ ಬೆಂಗಳೂರು ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ನ.5 ಮತ್ತು 7 ರಂದು ಸಹ ಬೇಡಿಕೆಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಮುಂಗಡ ಟಿಕೆಟ್‌ಗಳನ್ನು ಕೆ.ಎಸ್‌.ಆರ್‌.ಟಿ.ಸಿ (KSRTC) ಮೊಬೈಲ್‌ ಆ್ಯಪ್‌ ಹಾಗೂ  ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್‌ ಮಾಡಬಹುದಾಗಿದೆ. ಕೋವಿಡ್‌ (Covid) ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾ.ಕ.ರ.ಸಾ. ಸಂಸ್ಥೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  •  ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರು ನಗರದಿಂದ 1 ಸಾವಿರ ಹೆಚ್ಚುವರಿ ಬಸ್‌
  •  ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರು ನಗರದಿಂದ
  • ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿಗೆ ಬಸ್‌ ವ್ಯವಸ್ಥೆ 
  •  ದಾವಣಗೆರೆ, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ಗೆ ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ