ರಾಜ್ಯದ ಎಲ್ಲಾ ವಿಭಾಗಗಳಲ್ಲಿ KSRTCಯಿಂದ ‘ಸ್ಯಾನಿಟೈಸರ್‌ ಬಸ್‌’!

Published : Apr 11, 2020, 12:33 PM ISTUpdated : Apr 11, 2020, 01:04 PM IST
ರಾಜ್ಯದ ಎಲ್ಲಾ ವಿಭಾಗಗಳಲ್ಲಿ KSRTCಯಿಂದ ‘ಸ್ಯಾನಿಟೈಸರ್‌ ಬಸ್‌’!

ಸಾರಾಂಶ

ಕೊರೋನಾ: ರಾಜ್ಯದ ಎಲ್ಲಾ ವಿಭಾಗಗಳಲ್ಲಿ ಕೆಎಸ್ಸಾರ್ಟಿಸಿಯಿಂದ ‘ಸ್ಯಾನಿಟೈಸರ್‌ ಬಸ್‌’!| ಈ ಬಸ್‌ನಲ್ಲೇ ನಿಲ್ದಾಣಗಳಿಗೆ ಪ್ರವೇಶ ಕಡ್ಡಾಯ| ಸೋಂಕು ನಿವಾರಕ ದ್ರಾವಣ ಸಿಂಪಡಿಸಲಿರುವ ಬಸ್‌

ಬೆಂಗಳೂರು(ಏ.04): ಕೆಟ್ಟು ನಿಂತಿರುವ ಬಸ್‌ಗಳನ್ನು ಕೊರೋನಾ ಸೋಂಕು ತಡೆಗಟ್ಟಲು ‘ಸ್ಯಾನಿಟೈಸರ್‌ ಬಸ್‌’ಗಳನ್ನಾಗಿ ಪರಿವರ್ತಿಸಲಾಗುತ್ತಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಬೆಂಗಳೂರು ಘಟಕದಲ್ಲಿ ಮೊದಲ ಬಸ್‌ ಸಿದ್ಧವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.

ಬಸ್‌ ನಿಲ್ದಾಣಕ್ಕೆ ಬರುವ ಸಿಬ್ಬಂದಿಗಳು, ಪ್ರಯಾಣಿಕರು ಸಾನಿಟೈಸರ್‌ ಬಸ್‌ ಹಾದು ಹೋಗುವುದು ಕಡ್ಡಾಯವಾಗಲಿದೆ. ಸೋಂಕು ನಿವಾರಕ ದ್ರಾವಣವನ್ನು ‘ಸ್ಯಾನಿಟೈಸರ್‌ ಬಸ್‌’ ಸಿಂಪಡೆಣೆ ಮಾಡಲಿದೆ.

ಅಂಗಡಿಗಳಿಗೆ ಅಕ್ಕಿ, ಬೇಳೆ, ಬಿಸ್ಕತ್‌ ಪೂರೈಕೆ ಕೊರತೆ!

ಶುಕ್ರವಾರ ಶಾಂತಿನಗರದ ನಿಗಮದ ಕೇಂದ್ರೀಯ ವಿಭಾಗ ಡಿಪೋದಲ್ಲಿ ಆಯೋಜಿಸಿದ್ದ ವಿಭಾಗೀಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ಸಾನಿಟೈಸರ್‌ ಸುರಂಗ ಮಾದರಿಯಲ್ಲಿಯೇ ಕೆಟ್ಟು ನಿಂತಿರುವ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಸ್ಯಾನಿಟೈಸರ್‌ ಬಸ್ಸುಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಸ್ಯಾನಿಟೈಸರ್‌ ಬಸ್ಸು ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಬಸ್‌ ನಿರ್ಮಾಣವಾಗಲಿದೆ’ ಎಂದು ಹೇಳಿದರು.

‘ಇದೇ ರೀತಿ ರಾಜ್ಯದ ಎಲ್ಲಾ ಕೆಎಸ್‌ಆರ್‌ಟಿಸಿ ವಿಭಾಗಗಳಲ್ಲಿಯೂ ‘ಸ್ಯಾನಿಟೈಸರ್‌ ಬಸ್‌’ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ಬಸ್‌ ನಿಲ್ದಾಣಕ್ಕೆ ಬರುವ ಸಿಬ್ಬಂದಿಗಳು, ಪ್ರಯಾಣಿಕರು ಸಾನಿಟೈಸರ್‌ ಬಸ್‌ ಹಾದು ಹೋಗುವುದನ್ನು ಕಡ್ಡಾಯಗೊಳಿಸಲಾಗಿದೆ’ ಎಂದರು.

ಮೊದಲ ಬಾರಿ ಹೋಂ ಮೇಡ್ ಮಾಸ್ಕ್ ಧರಿಸಿದ ಮೋದಿ, ಮಹತ್ವದ ಸಂದೇಶ ರವಾನೆ!

ಲಾಕ್‌ಡೌನ್‌ ತೆರವಾದ ಜಿಲ್ಲೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಬಸ್‌ ಕಾರ್ಯಾಚರಣೆ ಮಾಡಬೇಕಾಗಬಹುದು. ಹಾಗಾಗಿ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಿಯೇ ಕರ್ತವ್ಯ ನಿರ್ವಹಿಸಬೇಕು. ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮಾಸ್ಕ್‌ಗಳನ್ನು ಸಾಕಷ್ಟುಸಂಖ್ಯೆಯಲ್ಲಿ ಸಂಗ್ರಹಿಸಿಟ್ಟುಕೊಳ್ಳುವಂತೆ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ