
ಬೆಂಗಳೂರು (ಜು.13): ತಿರುಪತಿ ತಿಮ್ಮಪ್ಪನ ಭಕ್ತರಿಗೆ ಕೆಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಕೆಎಸ್ ಆರ್ ಟಿಸಿಯಿಂದ ತಿರುಪತಿ ಪ್ಯಾಕೇಜ್ ಟೂರ್ ಪುನರಾರಂಭ ಮಾಡಲಾಗಿದೆ.
ಕೊರೊನಾ ಹಿನ್ನೆಲೆ ಎರಡು ತಿಂಗಳಿಂದ ಸ್ಥಗಿತಗೊಂಡಿದ ತಿರುಪತಿ ಪ್ಯಾಕೇಜ್ ಟೂರ್ ಜುಲೈ 16 ರಿಂದ ಆರಂಭವಾಗಲಿದೆ. ಐರಾವತ ಕ್ಲಬ್ ಕ್ಲಾಸ್ ಬಸ್ ನಲ್ಲಿ ಪ್ರಯಾಣ ಹಾಗೂ ತಿಮ್ಮಪ್ಪನ ದರ್ಶನಕ್ಕೆ ತೆರಳಬಹುದಾಗಿದೆ.
ಕರ್ನಾಟಕದಿಂದ ಕೇರಳಕ್ಕೆ ಬಸ್ ಸೇವೆ ಪುನಾರಂಭ
ವಾರದ ದಿನಗಳಲ್ಲಿ 2,200 ರೂಪಾಯಿ ಹಾಗೂ ವಾರಾಂತ್ಯದ ದಿನಗಳಲ್ಲಿ 2,600 ರೂಪಾಯಿ ಪ್ರಯಾಣ ದರದಲ್ಲಿ ತಿಮ್ಮಪ್ಪನ ದರ್ಶನ ಮಾಡಬಹುದಾಗಿದೆ.
ಕೆಎಸ್ ಆರ್ ಟಿಸಿ ವೆಬ್ ಸೈಟ್ ಮೂಲಕ ತಿರುಪತಿಗೆ ಹೋಗುವವರು ಸೀಟ್ ಬುಕಿಂಗ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
https://ksrtc.in/oprs-web/ ಮೂಲಕ ಪ್ರಯಾಣಿಕರು ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ