ಕುಡುಪು ಗುಂಪು ಹ ತ್ಯೆಯಲ್ಲಿ ಅಮಾಯಕರ ಸಿಲುಕಿಸಿದರೆ ಹೋರಾಟ: ಶಾಸಕ ಡಾ.ಭರತ್‌ ಶೆಟ್ಟಿ

Published : May 03, 2025, 07:36 AM ISTUpdated : May 03, 2025, 07:58 AM IST
ಕುಡುಪು ಗುಂಪು ಹ ತ್ಯೆಯಲ್ಲಿ ಅಮಾಯಕರ ಸಿಲುಕಿಸಿದರೆ ಹೋರಾಟ: ಶಾಸಕ ಡಾ.ಭರತ್‌ ಶೆಟ್ಟಿ

ಸಾರಾಂಶ

ಕುಡುಪುವಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ ಆಕಸ್ಮಿಕ ಘಟನೆ. ಪ್ರಕರಣದಲ್ಲಿ ರಾಜಕೀಯ ನಡೆಸದೇ, ಅಪರಾಧವನ್ನಾಗಿಯೇ ನೋಡಬೇಕು. ರಾಜಕೀಯಕ್ಕಾಗಿ ಅಮಾಯಕ ಬಿಜೆಪಿ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸಿದರೆ ನಾವು ಅಮಾಯಕರ ಪರವಾಗಿ ನಿಲ್ಲುತ್ತೇವೆ, ಪ್ರತಿಭಟನೆ, ಠಾಣೆಗೆ ಘೇರಾವ್‌ ಹಾಕುತ್ತೇವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.

ಮಂಗಳೂರು (ಮೇ.3): ಕುಡುಪುವಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ ಆಕಸ್ಮಿಕ ಘಟನೆ. ಪ್ರಕರಣದಲ್ಲಿ ರಾಜಕೀಯ ನಡೆಸದೇ, ಅಪರಾಧವನ್ನಾಗಿಯೇ ನೋಡಬೇಕು. ರಾಜಕೀಯಕ್ಕಾಗಿ ಅಮಾಯಕ ಬಿಜೆಪಿ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸಿದರೆ ನಾವು ಅಮಾಯಕರ ಪರವಾಗಿ ನಿಲ್ಲುತ್ತೇವೆ, ಪ್ರತಿಭಟನೆ, ಠಾಣೆಗೆ ಘೇರಾವ್‌ ಹಾಕುತ್ತೇವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತರು ಇದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ರವೀಂದ್ರ ನಾಯಕ್ ಅವರ ಹೆಸರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹೇಳಿದ್ದಾರೆ. 

ಈ ಆರೋಪಕ್ಕೆ ಅವರು ಯಾವುದೇ ಸಾಕ್ಷ್ಯ ಒದಗಿಸಿಲ್ಲ. ಬಿಜೆಪಿಯಲ್ಲಿ ಸಕ್ರಿಯವಾಗಿದ್ದಾರೆ ಎಂಬ ಕಾರಣಕ್ಕೆ ಪ್ರಕರಣದಲ್ಲಿ ಅವರನ್ನು ಸಿಲುಕಿಸಲಾಗುತ್ತಿದೆ. ಆರೋಪಿಗಳನ್ನು ಪೊಲೀಸರು ಗುರುತಿಸುವ ಬದಲಿಗೆ ಇಂತವರೇ ಆರೋಪಿಗಳು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹೇಗೆ ತೀರ್ಪು ನೀಡುತ್ತಾರೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಹಿಂದೂ ಸಮಾಜ ಎಂದರೆ ಅಲರ್ಜಿ ಯಾಕೆ?: ರಮಾನಾಥ್ ರೈ ವಿರುದ್ಧ ಭರತ್ ಶೆಟ್ಟಿ ಕಿಡಿ!

ಕುಡುಪು ಪ್ರಕರಣದಲ್ಲಿ ನಮಗೆ ೩೦ ಜನರು ಆರೋಪಿಗಳನ್ನು ನೀಡಿ ಎಂದು ಸ್ಥಳೀಯ ಬಿಜೆಪಿ ಕಾರ್ಯಕರ್ತರ ಬಳಿ ಪೊಲೀಸರು ಹೇಳುತ್ತಿದ್ದಾರೆ. ನಮಗೆ ರಾಜಕೀಯ ಒತ್ತಡವಿದೆ ಎಂದು ಅನಧಿಕೃತವಾಗಿ ಪೊಲೀಸರು ಒಪ್ಪಿಕೊಳ್ಳುತ್ತಿದ್ದಾರೆ. ಇಂತವರನ್ನೇ ಬಂಧಿಸಬೇಕು ಎಂಬ ಒತ್ತಡವಿದೆ ಎನ್ನುತ್ತಿದ್ದಾರೆ. 

ಕ್ರಿಕೆಟ್ ಆಟದ ಸ್ಥಳದಲ್ಲಿದ್ದವರನ್ನೂ ಬಂಧಿಸಲಾಗುತ್ತಿದೆ. ಅಮಾಯಕರನ್ನು ಬಂಧಿಸಿದರೆ ನಾವು ಸುಮ್ಮನಿರುವುದಿಲ್ಲ. ಈ ಪ್ರಕರಣದಲ್ಲಿ ಅಮಾಯಕರ ಬಂಧನ ರಾಷ್ಟ್ರದ್ರೋಹ ಎಂದರೂ ತಪ್ಪಾಗದು ಎಂದು ಡಾ. ಭರತ್ ಶೆಟ್ಟಿ ಹೇಳಿದರು.

ಇದನ್ನೂ ಓದಿ: ರಾಹುಲ್‌ ಗಾಂಧಿ ನಿಂದನೆ ಆರೋಪ; ಬಿಜೆಪಿ ಶಾಸಕ ಡಾ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್!

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಉಪಾಧ್ಯಕ್ಷ ಲೋಹಿತ್ ಅಮೀನ್, ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಆಶಿತ್ ನೋಂಡಾ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಮನೋಹರ ಶೆಟ್ಟಿ, ರಣದೀಪ್ ಕಾಂಚನ್ ಇದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2028ರವರೆಗೆ ನೀವೇ ಸಿಎಂ ಆಗಿರಿ-ವಿಪಕ್ಷ ನಾಯಕರು; ಸಂಜೆ ಎಲ್ಲರೂ ಬನ್ನಿ, ಒಟ್ಟಿಗೆ ಊಟ ಮಾಡೋಣ- ಸಿದ್ದರಾಮಯ್ಯ!
ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?