ರೈಲ್ವೆ ನಿಲ್ದಾಣಗಳಲ್ಲಿ 15 ವರ್ಷ ಬಳಿಕ ಮತ್ತೆ ಮಣ್ಣಿನ ಕಪ್‌ನಲ್ಲಿ ಟೀ!

Published : Jan 21, 2019, 01:12 PM ISTUpdated : Jan 21, 2019, 01:41 PM IST
ರೈಲ್ವೆ ನಿಲ್ದಾಣಗಳಲ್ಲಿ 15 ವರ್ಷ ಬಳಿಕ ಮತ್ತೆ ಮಣ್ಣಿನ ಕಪ್‌ನಲ್ಲಿ ಟೀ!

ಸಾರಾಂಶ

ರೈಲ್ವೆ ನಿಲ್ದಾಣಗಳಲ್ಲಿ 15 ವರ್ಷ ಬಳಿಕ ಮತ್ತೆ ಮಣ್ಣಿ ಕಪ್‌ನಲ್ಲಿ ಟೀ!| ವಾರಣಾಸಿ, ರಾಯ್‌ ಬರೇಲಿ ನಿಲ್ದಾಣಗಳಲ್ಲಿ ಜಾರಿ

 

ನವದೆಹಲಿ[ಜ.21]: ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್‌ ಮತ್ತು ಪೇಪರ್‌ ಕಪ್‌ಗಳ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಿಂದ ಕುಲ್ಹಾಡ್ಸ್‌ (ಮಣ್ಣಿನ ಕಪ್‌)ಗಳನ್ನು ಮರು ಪರಿಚಯಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್‌ ಯಾದವ್‌ 15 ವರ್ಷಗಳ ಹಿಂದೆ ರೈಲಿನಲ್ಲಿ ಟೀ ಹಾಗೂ ಕಾಫಿಯನ್ನು ಮಣ್ಣಿನ ಕಪ್‌ಗಳಲ್ಲಿ ನೀಡುವುದನ್ನು ಪರಿಚಯಿಸಿದ್ದರು.

ವಾರಾಣಸಿ ಹಾಗೂ ರಾಯ್‌ಬರೇಲಿ ನಿಲ್ದಾಣಗಳಲ್ಲಿ ಟೆರಾಕೋಟಾ ಲೇಪಿತ ಮಣ್ಣಿನ ಕಪ್‌ಗಳು, ಲೋಟ ಹಾಗೂ ಪ್ಲೇಟ್‌ಗಳನ್ನು ಪರಿಚಯಿಸುವಂತೆ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಸೂಚಿಸಿದ್ದಾರೆ. ಇದರಿಂದ ಪ್ರಯಾಣಿಕರಿಗೆ ತಾಜಾತನದ ಅನುಭವ ದೊರೆಯುವುದರ ಜೊತೆಗೆ ಕುಂಬಾರರಿಗೆ ಉತ್ತಮ ಮಾರುಕಟ್ಟೆಲಭ್ಯವಾಗಲಿದೆ.

ವಾರಾಣಸಿ ಹಾಗೂ ರಾಯ್‌ ಬರೇಲಿ ರೈಲ್ವೆ ನಿಲ್ದಾಣಗಳಲ್ಲಿ ಸ್ಥಳೀಯವಾಗಿ ಉತ್ಪಾದಿಸಿದ ಮತ್ತು ಪರಿಸರ ಸ್ನೇಹಿ ಟೆರಾಕೋಟಾ ಲೇಪಿತ ಮಣ್ಣಿನ ಕಪ್‌, ಲೋಟಾ ಮತ್ತು ಪ್ಲೇಟ್‌ಗಳು ಪ್ರಯಾಣಿಕರಿಗೆ ಲಭ್ಯವಾಗುವುದನ್ನು ಖಾತರಿಪಡಿಸಿಕೊಳ್ಳುವಂತೆ ರೈಲ್ವೆ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ