ಕೆವಿಜಿ ಬ್ಯಾಂಕ್‌ ಇನ್ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌!

Published : May 01, 2025, 08:56 AM ISTUpdated : May 01, 2025, 09:41 AM IST
ಕೆವಿಜಿ ಬ್ಯಾಂಕ್‌ ಇನ್ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌!

ಸಾರಾಂಶ

ಕೆವಿಜಿ ಬ್ಯಾಂಕ್‌, ಗ್ರಾಮೀಣ ಜನರ ಒಡನಾಡಿ ಎಂದೇ ಹೆಸರು ಮಾಡಿದ್ದ ಇಲ್ಲಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಇನ್ನಿಲ್ಲ. ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್ ಎಂಬ ನೀತಿಯನ್ವಯ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯ ಮೇರೆಗೆ ಧಾರವಾಡ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಹಾಗೂ ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮೇ 1ರಿಂದ ಪರಸ್ಪರ ಒಗ್ಗೂಡಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂಬ ಹೊಸ ನಾಮಧೇಯ ಹೊಂದಲಿವೆ.

ಧಾರವಾಡ (ಮೇ.1): ಕೆವಿಜಿ ಬ್ಯಾಂಕ್‌, ಗ್ರಾಮೀಣ ಜನರ ಒಡನಾಡಿ ಎಂದೇ ಹೆಸರು ಮಾಡಿದ್ದ ಇಲ್ಲಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಇನ್ನಿಲ್ಲ. ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್ ಎಂಬ ನೀತಿಯನ್ವಯ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯ ಮೇರೆಗೆ ಧಾರವಾಡ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ಹಾಗೂ ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮೇ 1ರಿಂದ ಪರಸ್ಪರ ಒಗ್ಗೂಡಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎಂಬ ಹೊಸ ನಾಮಧೇಯ ಹೊಂದಲಿವೆ.

ನೂತನ ಬ್ಯಾಂಕಿನ ಪ್ರಧಾನ ಕಚೇರಿ ಬಳ್ಳಾರಿಯಲ್ಲಿ ಇರಲಿದೆ. ಉದಯಗೊಂಡ ಈ ಬ್ಯಾಂಕ್ ಸರ್ಕಾರಿ ಸ್ವಾಮಿತ್ವದಲ್ಲಿಯೇ ಮುಂದುವರಿಯಲಿದ್ದು, ಕೇಂದ್ರ ಸರ್ಕಾರ (ಶೇ. 50) ರಾಜ್ಯ ಸರ್ಕಾರ (ಶೇ. 15) ಮತ್ತು ಕೆನರಾ ಬ್ಯಾಂಕ್ (ಶೇ. 35) ತಮ್ಮ ಪಾಲುದಾರಿಕೆಯನ್ನು ಮುಂದುವರೆಸಲಿವೆ. ಉದಯಗೊಳ್ಳುವ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸೇವೆ ಇನ್ನು ಮುಂದೆ ಸಮಗ್ರ ಕರ್ನಾಟಕಕ್ಕೆ ದೊರೆಯಲಿದ್ದು ಈ ಬ್ಯಾಂಕು 1751 ಶಾಖೆಗಳೊಂದಿಗೆ ₹104851 ಕೋಟಿ ವಹಿವಾಟು ನಡೆಸುವ ದೇಶದ ಎರಡನೇ ಬೃಹತ್ ಗ್ರಾಮೀಣ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಇಂದಿನಿಂದ ಒಂದೇ ಗ್ರಾಮೀಣ ಬ್ಯಾಂಕ್‌

ನೂತನ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಾರಥ್ಯವನ್ನು ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ, ಬ್ಯಾಂಕಿಂಗ್ ರಂಗದಲ್ಲಿ 31 ವರ್ಷಗಳ ಅನುಭವ ಹೊಂದಿರುವ ಈ ಹಿಂದಿನ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಶ್ರೀಕಾಂತ ಎಂ ಭಂಡಿವಾಡ ವಹಿಸಲಿದ್ದಾರೆ. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು 9 ಜಿಲ್ಲೆಗಳ ಕಾರ್ಯಕ್ಷೇತ್ರದಲ್ಲಿ 629 ಶಾಖೆಗಳೊಂದಿಗೆ ₹38714 ಕೋಟಿ ವಹಿವಾಟು ನಡೆಸುತ್ತಲಿದ್ದರೆ, ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ಗ್ರಾಮೀಣ ಬ್ಯಾಂಕ್ 22 ಜಿಲ್ಲೆಗಳಲ್ಲಿ 1122 ಶಾಖೆಗಳೊಂದಿಗೆ ₹66137 ಕೋಟಿ ವಹಿವಾಟು ನಡೆಸುತ್ತಲಿತ್ತು.

ಜನಸಾಮಾನ್ಯರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 1975 ರಲ್ಲಿ ಗ್ರಾಮೀಣ ಬ್ಯಾಂಕುಗಳನ್ನು ಸ್ಥಾಪಿಸಿತು. ಆ ಸಮಯದಲ್ಲಿ ದೇಶಾದ್ಯಂತ 196 ಗ್ರಾಮೀಣ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿದ್ದವು ಮತ್ತು ರಾಜ್ಯದಲ್ಲಿ 13 ಗ್ರಾಮೀಣ ಬ್ಯಾಂಕುಗಳಿದ್ದವು. ಗ್ರಾಮೀಣ ಬ್ಯಾಂಕುಗಳನ್ನು ಇನ್ನಷ್ಟು ಬಲಪಡಿಸುವ ದಿಶೆಯಲ್ಲಿ ಕೇಂದ್ರ ಸರ್ಕಾರ 2005ರಲ್ಲಿ ಮೊದಲ ಬಾರಿಗೆ ಗ್ರಾಮೀಣ ಬ್ಯಾಂಕುಗಳನ್ನು ಒಗ್ಗೂಡಿಸುವ ದಿಶೆಯಲ್ಲಿ ವಿಲೀನ ಪ್ರಕ್ರಿಯೆ ಪ್ರಾರಂಭಿಸಿತು. ಇದರ ಅನ್ವಯ ಮತ್ತು ತದನಂತರದ ವಿಲೀನ ಪ್ರಕ್ರಿಯೆಯ ಪರಿಣಾಮವಾಗಿ ರಾಜ್ಯದ ಎರಡು ಗ್ರಾಮೀಣ ಬ್ಯಾಂಕುಗಳನ್ನು ಒಳಗೊಂಡು ಪ್ರಸ್ತುತ ದೇಶದಲ್ಲಿ 43 ಗ್ರಾಮೀಣ ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿವೆ.

 ಇದನ್ನೂ ಓದಿ: ಮೇ 1ರಿಂದ ಜಾರಿಗೆ ಬರುವ ಹೊಸ ನಿಯಮಗಳು: ನಿಮ್ಮ ಜೇಬಿಗೆ ಪರಿಣಾಮ ಬೀರುತ್ತದೆಯೇ?.

ಪ್ರಾದೇಶಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸಿದ್ದ ಈ ಮೊದಲಿದ್ದ ಈ ಎರಡೂ ಗ್ರಾಮೀಣ ಬ್ಯಾಂಕುಗಳು ಜನಸಾಮಾನ್ಯರ ಅದರಲ್ಲೂ ರೈತರ ಬೆನ್ನೆಲುಬಾಗಿ, ಬಡ- ಕಡು ಬಡವರ ಜೀವನಾಡಿಯಾಗಿ, ಕುಶಲ ಕರ್ಮಿಗಳ ಆಶಾಕಿರಣವಾಗಿ ಕಾರ್ಯ ನಿರ್ವಹಿಸಿವೆ. ಇದೀಗ ವಿಲೀನಗೊಂಡು ಹೊರಹೊಮ್ಮಲಿರುವ ನೂತನ ಬ್ಯಾಂಕು ಕೂಡ ಅದೇ ಸಂಪ್ರದಾಯದಲ್ಲಿ ಇನ್ನೂ ಹೆಚ್ಚಿನ ಭದ್ರತೆ ಮತ್ತು ವಿಶ್ವಾಸದಿಂದ ಮುನ್ನಡೆಯಲಿದೆ ಎಂದು ನೂತನ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಅಧ್ಯಕ್ಷ ಶ್ರೀಕಾಂತ ಎಂ ಭಂಡಿವಾಡ ಹೇಳಿದರು.

ಈ ಮಹತ್ತರ ಘಟ್ಟದಲ್ಲಿ ಗ್ರಾಹಕರು ಮತ್ತು ಸಾರ್ವಜನಿಕರ ಸಹಕಾರ ಕೋರಿರುವ ಅವರು ಸರ್ಕಾರಿ ಸ್ವಾಮಿತ್ವದ ಅತಿದೊಡ್ಡ ಗ್ರಾಮೀಣ ಬ್ಯಾಂಕು ಇದಾಗಿರುವುದರಿಂದ ಗ್ರಾಹಕ ವರ್ಗ ಇನ್ನಷ್ಟು ಉತ್ತಮ ಸೇವೆ ಪಡೆಯಲಿದೆ ಎಂದೂ ಅವರು ತಿಳಿಸಿರುವರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Railway Drug Mafia: ರೈಲುಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ.. ಹೆಚ್ಚಾಗುತ್ತಲೇ ಇದೆ ಗಾಂಜಾ ಸಾಗಣೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ