ಕರ್ನಾಟಕದ 10 ಜಿಲ್ಲೆಗಳಲ್ಲಿ ಜೂನ್‌ ಮಳೆ ಕೊರತೆ

Published : Jul 03, 2022, 05:15 AM IST
ಕರ್ನಾಟಕದ 10 ಜಿಲ್ಲೆಗಳಲ್ಲಿ ಜೂನ್‌ ಮಳೆ ಕೊರತೆ

ಸಾರಾಂಶ

*   ರಾಜ್ಯದಲ್ಲಿ ಒಟ್ಟಾರೆ ಶೇ.20 ಜೂನ್‌ ಮಳೆ ಕೊರತೆ *   12 ಜಿಲ್ಲೆಗಳಲ್ಲಿ ವಾಡಿಕೆಯ ಮಳೆ, 9ರಲ್ಲಿ ಹೆಚ್ಚು *  ನಾಡಿದ್ದಿನಿಂದ ಮಳೆ ಬಿರುಸು?  

ಬೆಂಗಳೂರು(ಜು.03):  ನೈಋುತ್ಯ ಮುಂಗಾರಿನ ಆರಂಭದ ತಿಂಗಳಾದ ಜೂನ್‌ನಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ಮಳೆಯ ಕೊರತೆಯಾಗಿದೆ. ಉಳಿದಂತೆ 12 ಜಿಲ್ಲೆಗಳಲ್ಲಿ ವಾಡಿಕೆಯ ಮಳೆ, ಎರಡು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮತ್ತು ಏಳು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಿದೆ. ಜೂನ್‌ 1-30ರ ಅವಧಿಯಲ್ಲಿ ರಾಜ್ಯದಲ್ಲಿ 208 ಮಿಲಿಮೀಟರ್‌ ವಾಡಿಕೆ ಮಳೆ ಆಗುತ್ತದೆ. ಆದರೆ ಈ ಬಾರಿ ಕೇವಲ 166 ಮಿ.ಮೀ. ಮಳೆಯಾಗಿದ್ದು, ಶೇ.20ರಷ್ಟು ಮಳೆ ಕೊರತೆಯಾಗಿದೆ.

ಮಲೆನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್‌ನಲ್ಲಿ 383.6 ಮಿ.ಮೀ. ಮಳೆ ಸುರಿಯುವುದು ವಾಡಿಕೆ. ಆದರೆ ಈ ಬಾರಿ ಕೇವಲ 207.5 ಮಿ.ಮೀ. ಮಳೆ (ಶೇ.46 ಕೊರತೆ) ಸುರಿದಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 872.7 ಮಿ.ಮೀ. ವಾಡಿಕೆ ಮಳೆ ಆಗುತ್ತಿತ್ತು. ಆದರೆ 585.2 ಮಿ.ಮೀ. ಮಾತ್ರ ಮಳೆ (ಶೇ.33 ಕೊರತೆ) ಸುರಿದಿದೆ.

ಚಿಕ್ಕಮಗಳೂರಲ್ಲಿ ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿ

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್‌, ಕೊಪ್ಪಳ, ವಿಜಯಪುರ, ಗದಗ, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ 106 ಮಿ.ಮೀ. ಮಳೆಯ ಬದಲು 93.6 ಮಿ.ಮೀ. ಮಳೆ (ಶೇ.12 ಕೊರತೆ) ಸುರಿದಿದೆ. ಹವಾಮಾನ ಇಲಾಖೆಯು ವಾಡಿಕೆಗಿಂತ ಶೇ.19ರಷ್ಟು ಮಳೆಯ ಹೆಚ್ಚು ಮತ್ತು ಕಡಿಮೆಯನ್ನು ವಾಡಿಕೆಯ ಮಳೆ ಎಂದೇ ಪರಿಗಣಿಸುತ್ತದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ.56ರಷ್ಟುಮಳೆ ಕೊರತೆ ಆಗಿದೆ. ಉಳಿದಂತೆ ಕೊಡಗು ಶೇ.53, ಹಾವೇರಿ ಶೇ.50, ಚಿಕ್ಕಮಗಳೂರು ಶೇ.41, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಶೇ.35 ಮಳೆಯ ತೀವ್ರ ಅಭಾವವನ್ನು ಎದುರಿಸಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಹಾಸನವನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಮಳೆಯ ಕೊರತೆ ಹೆಚ್ಚಿದೆ.

ಉತ್ತರ ಒಳನಾಡಿನ ಕಲಬುರಗಿ ಮತ್ತು ಧಾರವಾಡದಲ್ಲಿ ಶೇ.25, ಬೆಳಗಾವಿಯಲ್ಲಿ ಶೇ.22ರಷ್ಟುಮಳೆಯ ಕೊರತೆ ಉಂಟಾಗಿದೆ. ಬೀದರ್‌, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ.

ಐದು ಜಿಲ್ಲೆಗಳಲ್ಲಿ ಭಾರೀ ಮಳೆ: ಮಂಗ್ಳೂರಲ್ಲಿ ಪ್ರವಾಹ, ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಸಾಮಾನ್ಯವಾಗಿ ಹಿಂಗಾರು ಋುತುವಿನಲ್ಲಿ ಹೆಚ್ಚು ಮಳೆ ಸುರಿಯುವ ದಕ್ಷಿಣ ಒಳನಾಡಿನಲ್ಲಿ ಈ ಬಾರಿ ಮುಂಗಾರು ಅಬ್ಬರಿಸಿದೆ. ವಾಡಿಕೆಗಿಂತ ಬೆಂಗಳೂರು ಗ್ರಾಮಾಂತರ ಶೇ.198, ಕೋಲಾರ ಶೇ.174, ತುಮಕೂರು ಶೇ.152, ಚಿಕ್ಕಬಳ್ಳಾಪುರ ಶೇ.142, ಕೋಲಾರ ಶೇ.164, ಬೆಂಗಳೂರು ನಗರ ಶೇ.129, ಮಂಡ್ಯ ಶೇ.128, ರಾಮನಗರ ಜಿಲ್ಲೆಯಲ್ಲಿ ಶೇ.124ರಷ್ಟುಹೆಚ್ಚು (ಶೇ. 85ರಷ್ಟು ಹೆಚ್ಚು) ಮಳೆಯಾಗಿದೆ.

ನಾಡಿದ್ದಿನಿಂದ ಮಳೆ ಬಿರುಸು?

ಮೇ ತಿಂಗಳಲ್ಲಿ ಮಳೆ ಜೋರಾಗಿ ಸುರಿದಿದ್ದರಿಂದ, ವಾಡಿಕೆಗೆ ಮುನ್ನ ಮುಂಗಾರು ರಾಜ್ಯ ಪ್ರವೇಶಿಸಿದ್ದರೂ ಜೂನ್‌ ತಿಂಗಳಲ್ಲಿ ಮುಂಗಾರು ಮಂಕಾಗಿದೆ. ಆದರೆ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಗಳಿವೆ. ಜುಲೈ 5ರಿಂದ ಮುಂಗಾರು ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ಹೇಳುತ್ತಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ