ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಹಿತಿ ಭಗವಾನ್‌ಗೆ ಮಸಿ ಬಳಿದ ಮಹಿಳಾ ಅಡ್ವಕೇಟ್

Published : Feb 04, 2021, 03:23 PM ISTUpdated : Feb 04, 2021, 04:51 PM IST
ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಹಿತಿ ಭಗವಾನ್‌ಗೆ ಮಸಿ ಬಳಿದ ಮಹಿಳಾ ಅಡ್ವಕೇಟ್

ಸಾರಾಂಶ

ಕೋರ್ಟ್‌ನಿಂದ  ಹೊರಗೆ ಬರುತ್ತಿದ್ದ ವೇಳೆ ಭಗವಾನ್ ಮುಖಕ್ಕೆ ಮಹಿಳಾ ಅಡ್ವಾಕೇಟ್ ಮಸಿ ಬಳಿದಿದ್ದಾರೆ. 

ಬೆಂಗಳೂರು, (ಫೆ.04): ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆನ್ನಲಾದ ಸಾಹಿತಿ ಭಗವಾನ್​ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿದ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ಹಿಂದು ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಭಗವಾನ್​ರವರು ಇಂದು (ಗುರುವಾರ) ಕೋರ್ಟ್​ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದಾದ ಬಳಿಕ ಭಗವಾನ್​ ಅವರು ಕೋರ್ಟ್​ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಅವರು ಮುಖಕ್ಕೆ ಮಸಿ ಬಳಿದಿದ್ದಾರೆ.

‘ಮಾತನಾಡಿದ್ರೆ ವಿವಾದ ಆಗುತ್ತೆ..ಕೇಸ್ ಬೀಳುತ್ತೆ.. ಈಗಾಗ್ಲೆ ಎರಡಿದೆ' 

ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಪ್ರೊ. ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ. ಗ್ರಾಮೀಣ ಜನರಿಗೆ ಹಿಂದು ಎಂದರೆ ಗೊತ್ತೇ ಇಲ್ಲ. ನೀವು ಯಾವ ಧರ್ಮ ಎಂದರೆ ಒಕ್ಕಲಿಗ, ಕುರುಬ ಅಂತ ಜಾತಿಗಳ ಹೆಸರನ್ನಷ್ಟೇ ಹೇಳುತ್ತಾರೆ. ಹಿಂದು‌ ಪದವನ್ನೇ ತೆಗೆದು ಹಾಕಬೇಕು. ನಿಮಗೆ ಮಾನ ಮರ್ಯಾದೆ ಇದ್ದರೆ ಆ ಪದ ತೆಗೆದು ಹಾಕಿ ಎಂದು ಹೇಳಿಕೆ ಕೊಟ್ಟಿದ್ದರು.
"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!