ಲಕ್ಷಾಂತರ ಭಕ್ತರಿಗೆ ಸಿದ್ಧಗಂಗಾ ಶ್ರೀ ದರ್ಶನ ಭಾಗ್ಯವಿಲ್ಲ

Published : Jan 23, 2019, 08:46 AM IST
ಲಕ್ಷಾಂತರ ಭಕ್ತರಿಗೆ ಸಿದ್ಧಗಂಗಾ ಶ್ರೀ ದರ್ಶನ ಭಾಗ್ಯವಿಲ್ಲ

ಸಾರಾಂಶ

ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ 15 ಲಕ್ಷಕ್ಕೂ ಹೆಚ್ಚು ಮಂದಿ ಶ್ರೀಗಳ ಶಿವೈಕ್ಯ ಶರೀರದ ದರ್ಶನ ಮಾಡಿದರು. ಸಾಗರೋಪಾದಿಯಲ್ಲಿ ಬರುತ್ತಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರು.

ತುಮಕೂರು :  ‘ನಡೆದಾಡುವ ದೇವರು’ ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಹೊರ ರಾಜ್ಯ ಸೇರಿ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. 

ಸೋಮವಾರ ಮಧ್ಯಾಹ್ನದಿಂದಲೇ ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿ ರಾಜ್ಯದ ಎಲ್ಲಾ ದಿಕ್ಕುಗಳಿಂದಲೂ ಭಕ್ತರು ಸಿದ್ಧಗಂಗೆ ಕಡೆ ಮುಖ ಮಾಡಿದರು. ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ 15 ಲಕ್ಷಕ್ಕೂ ಹೆಚ್ಚು ಮಂದಿ ಶ್ರೀಗಳ ಶಿವೈಕ್ಯ ಶರೀರದ ದರ್ಶನ ಮಾಡಿದರು. ಸಾಗರೋಪಾದಿಯಲ್ಲಿ ಬರುತ್ತಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರು.

ಲಕ್ಷಾಂತರ ಭಕ್ತರಿಗೆ ದರ್ಶನವಿಲ್ಲ

24 ಗಂಟೆಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರೆ ಇನ್ನುಳಿದ ಲಕ್ಷಾಂತರ ಭಕ್ತರಿಗೆ ಶ್ರೀಗಳ ದರ್ಶನ ಸಾಧ್ಯವಾಗದೇ ಹೋಯಿತು. ದೂರದೂರದ ಊರುಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾರ್ಥಿವ ಶರೀರವನ್ನು ಕೊನೆಯ ಬಾರಿ ನೋಡಬೇಕೆಂಬ ಅದಮ್ಯ ಆಸೆ ಹೊಂದಿದ್ದರು. 

ಆದರೆ ಕ್ರಿಯಾವಿಧಿಗೆ ತೆರಳಬೇಕಾಗಿದ್ದರಿಂದ ಮಂಗಳವಾರ ಸಂಜೆ ಬಳಿಕ ದರ್ಶನ ನಿರಾಕರಿಸಲಾಯಿತು. ಹೀಗಾಗಿ ಕೆಲ ಭಕ್ತರು ದೂರದೂರಿಂದ ಬಂದಿದ್ದೇವೆ, ಸ್ವಾಮೀಜಿಗಳ ಮುಖವನ್ನು ಒಮ್ಮೆ ನೋಡಿಕೊಂಡು ಹೋಗುತ್ತೇವೆ ಎಂದು ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!