ವಾಲ್ಮೀಕಿ ಹಗರಣ ಸಿಎಂ ಕಣ್ಣ ಕೆಳಗೇ ನಡೆದಿದೆ: ಆ‌ರ್.ಅಶೋಕ್‌

Published : Jun 02, 2024, 11:37 AM IST
ವಾಲ್ಮೀಕಿ ಹಗರಣ ಸಿಎಂ ಕಣ್ಣ ಕೆಳಗೇ ನಡೆದಿದೆ: ಆ‌ರ್.ಅಶೋಕ್‌

ಸಾರಾಂಶ

ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ. ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥವಾಗಿದೆ. ಈ ಹಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಪಾಲು ಸಿಕ್ಕಿದೆ ಎನ್ನುವ ಅನುಮಾನ ಮೂಡಿದೆ ಎಂದು ವಾಗ್ದಾಳಿ ನಡೆಸಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ 

ಬೆಂಗಳೂರು(ಜೂ.02):  ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿನ ಕೆಳಗೆಯೇ ಕೋಟ್ಯಂತರ ರು. ಹಗರಣ ನಡೆದರೂ ಅವರಿಗೆ ಮಾಹಿತಿ ಇಲ್ಲವಾಗಿದ್ದು, ತಕ್ಷಣ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. 

ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ. ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥವಾಗಿದೆ. ಈ ಹಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಪಾಲು ಸಿಕ್ಕಿದೆ ಎನ್ನುವ ಅನುಮಾನ ಮೂಡಿದೆ ಎಂದು ವಾಗ್ದಾಳಿ ನಡೆಸಿದರು. 

ಕಾಂಗ್ರೆಸ್‌ ಹೈಕಮಾಂಡ್‌ಗೆ ರಾಜ್ಯ ಸರ್ಕಾರವೇ ಎಟಿಎಂ: ಬಿ.ವೈ.ವಿಜಯೇಂದ್ರ ಆರೋಪ

ಸಿದ್ದರಾಮಯ್ಯ ಸರ್ಕಾರದಲ್ಲಿ ಲೂಟಿಯನ್ನು ತಡೆದವರು ನಿವೃತ್ತರಾಗ ಬೇಕು ಅಥವಾ ಆತ್ಮಹತ್ಯೆ ಮಾಡಿಕೊಳ್ಳಬೇಕು. ದಲಿತರಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗಿದೆ ಎಂಬುದನ್ನು ಇನ್ನೂ ಪತ್ತೆ ಮಾಡಬೇಕಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!