GST ಹೊಡೆತ, ಸಬ್ಸಿಡಿ ಕಡಿತ: ಸಂಕಷ್ಟದಲ್ಲಿರುವ ಚರ್ಮ ಕುಶಲಕರ್ಮಿಗಳಿಗೆ ಬೇಕಿದೆ ಸರ್ಕಾರದ ನೆರವು

Published : Nov 22, 2023, 10:03 PM IST
GST ಹೊಡೆತ, ಸಬ್ಸಿಡಿ ಕಡಿತ: ಸಂಕಷ್ಟದಲ್ಲಿರುವ ಚರ್ಮ ಕುಶಲಕರ್ಮಿಗಳಿಗೆ ಬೇಕಿದೆ ಸರ್ಕಾರದ ನೆರವು

ಸಾರಾಂಶ

ಕರ್ನಾಟಕ ಮಹಾರಾಷ್ಟ್ರದಲ್ಲಿ ಕೊಲ್ಹಾಪುರಿ ಚಪ್ಪಲಿ ಅಂದ್ರೆ ಫುಲ್ ಫೇಮಸ್. ಈ ಚಪ್ಪಲಿಗೆ ಮಹಾರಾಷ್ಟ್ರದ ಕೊಲ್ಹಾಪುರದ ಹೆಸರು ಬಂದಿದ್ದರೂ ತಯಾರಾಗೋದು ಮಾತ್ರ ಕರ್ನಾಟಕದಲ್ಲಿ. ಹಿಂದಿನ ಸರ್ಕಾರ ಅಥಣಿ ಚರ್ಮ ಕುಶಲಕರ್ಮಿಗಳ ಅನುಕೂಲಕ್ಕೆ ಕೊಲ್ಹಾಪುರಿ ಚಪ್ಪಲಿಗೆ ಪರ್ಯಾಯವಾಗಿ ಅಥಣಿ ಬ್ರ್ಯಾಂಡ್​ ಘೋಷಿಸಿತ್ತು.   

ಚಿಕ್ಕೋಡಿ (ನ.22): ಕರ್ನಾಟಕ ಮಹಾರಾಷ್ಟ್ರದಲ್ಲಿ ಕೊಲ್ಹಾಪುರಿ ಚಪ್ಪಲಿ ಅಂದ್ರೆ ಫುಲ್ ಫೇಮಸ್. ಈ ಚಪ್ಪಲಿಗೆ ಮಹಾರಾಷ್ಟ್ರದ ಕೊಲ್ಹಾಪುರದ ಹೆಸರು ಬಂದಿದ್ದರೂ ತಯಾರಾಗೋದು ಮಾತ್ರ ಕರ್ನಾಟಕದಲ್ಲಿ. ಹಿಂದಿನ ಸರ್ಕಾರ ಅಥಣಿ ಚರ್ಮ ಕುಶಲಕರ್ಮಿಗಳ ಅನುಕೂಲಕ್ಕೆ ಕೊಲ್ಹಾಪುರಿ ಚಪ್ಪಲಿಗೆ ಪರ್ಯಾಯವಾಗಿ ಅಥಣಿ ಬ್ರ್ಯಾಂಡ್​ ಘೋಷಿಸಿತ್ತು. ಆದ್ರೆ ಸರಿಯಾದ ಮಾರ್ಕೆಟಿಂಗ್ ಸೌಲಭ್ಯವಿಲ್ಲದೇ ಚರ್ಮ ಉದ್ಯೋಗವನ್ನೇ ನಂಬಿ ಜೀವನ ಸಾಗಿಸುವ ಬೆಳಗಾವಿ ಜಿಲ್ಲೆಯ ಒಂದೂವರೆ ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಮುಂಬರುವ ಬೆಳಗಾವಿಯ ಅಧಿವೇಶನದಲ್ಲಿ ಚರ್ಮಕುಶಲಕರ್ಮಿಗಳ ಬಗ್ಗೆ ಚರ್ಚಿಸಿ ನೆರವಿಗೆ ಬರುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಡಿಟೇಲ್ ವರದಿ ಇಲ್ಲಿದೆ ನೋಡಿ. 

ಹೌದು! ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದ ಅಥಣಿ, ನಿಪ್ಪಾಣಿ, ರಾಯಬಾಗ ಸೇರಿದಂತೆ ಹಲವೆಡೆ ಒಂದೂವರೆ ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳು ಇದ್ದು ಹಲವು ವರ್ಷಗಳಿಂದ ಚರ್ಮದ ಚಪ್ಪಲಿ ತಯಾರಿಸುತ್ತಿದ್ದಾರೆ. ಅಥಣಿ ಸೇರಿ ವಿವಿಧೆಡೆ ತಯಾರಾಗುವ ವಿಶಿಷ್ಟ ಶೈಲಿಯ ಚಪ್ಪಲಿಗೆ ಹೆಸರು ಬಂದಿದ್ದು ಮಾತ್ರ ಮಹಾರಾಷ್ಟ್ರದ ಕೊಲ್ಹಾಪುರ. ಹೌದು ಶಾಹು ಮಹಾರಾಜರ ಕಾಲದಿಂದಲೂ ಅಥಣಿ ತಾಲೂಕಿನ ಮದಬಾವಿ ಸೇರಿ ವಿವಿಧೆಡೆ ತಯಾರಾಗುತ್ತಿದ್ದ ಚಪ್ಪಲಿಗಳನ್ನು ಕೊಲ್ಹಾಪುರದಲ್ಲಿ ಮಾರಾಟ ಮಾಡಲಾಗುತ್ತಿತ್ತು. ಹೀಗಾಗಿ ಅಂದಿನಿಂದಲೂ ಈ ಚಪ್ಪಲಿಗಳಿಗೆ ಕೊಲ್ಹಾಪುರಿ ಚಪ್ಪಲಿ ಅಂತಾನೇ ಹೆಸರು ಬಂದಿದೆ. 

ಎಚ್‌ಡಿಕೆ ಹೇಳಿದಂತೆ ಕೀಳುಮಟ್ಟಕ್ಕೆ ಇಳಿದಿದ್ರೆ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್‌

ಮಾರುಕಟ್ಟೆಯಲ್ಲಿ ಬಂದ ದೊಡ್ಡ ದೊಡ್ಡ ಬ್ರ್ಯಾಂಡ್​ಗಳ ಮಧ್ಯೆ ಅಥಣಿಯ ಚಪ್ಪಲಿ ತಯಾರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಚರ್ಮ ಕುಶಲಕರ್ಮಿಗಳ ಬಳಿಯೂ ಶೇಕಡ 12 ರಷ್ಟು ಜಿಎಸ್​ಟಿ ವಸೂಲಾತಿ ಮಾಡಲಾಗುತ್ತಿದ್ದು ನಮಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ಚರ್ಮಕಾರ ಸಮಾಜ ಮಹಾಒಕ್ಕೂಟ ಅಧ್ಯಕ್ಷ ಅನಿಲ್ ಕುಮಾರ್ ಸೌದಾಗರ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಅಥಣಿಯಲ್ಲಿ ತಯಾರಾಗಿ ವಿದೇಶಕ್ಕೆ ಚಪ್ಪಲಿಗಳು ರಫ್ತಾಗುತ್ತಿತ್ತು. ಅದನ್ನೂ ಸಹ ಈಗ ಸ್ಥಗಿತಗೊಳಿಸಿದ್ದಾರೆ. ಮೊದಲು ರಾಜ್ಯ ಸರ್ಕಾರ 60;40 ಅನುಪಾತದಲ್ಲಿ ಸಬ್ಸಿಡಿ ಸೌಲಭ್ಯ ನೀಡುತ್ತಿತ್ತು ಇದನ್ನು ಕಡಿತ ಮಾಡಿದ್ದು ಚರ್ಮ ಕುಶಲಕರ್ಮಿಗಳು ಸಂಕಷ್ಟದಲ್ಲಿದ್ದಾರೆ. 

ಹೀಗಾಗಿ ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ನಡೆಯುವ ಅಧಿವೇಶನದಲ್ಲಿ ಚರ್ಮಕುಶಲಕರ್ಮಿಗಳ ಸಂಕಷ್ಟದ ಬಗ್ಗೆ ಚರ್ಚೆ ಮಾಡಬೇಕು. ಚರ್ಮ ಕುಶಲಕರ್ಮಿಗಳ ಅನುಕೂಲಕ್ಕಾಗಿ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಿ 200 ಕೋಟಿ ರೂ. ಹಣ ಮೀಸಲಿಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಕೊಲ್ಹಾಪುರ ಬ್ರ್ಯಾಂಡ್ ಗೆ ಪರ್ಯಾಯವಾಗಿ ರಾಜ್ಯದಲ್ಲಿ ಅಥಣಿ ಬ್ರ್ಯಾಂಡ್ ಚರ್ಮದ ಚಪ್ಪಲಿ ಹೆಸರಿನಡಿ ಮಾರಾಟ ಮಾಡಬೇಕೆಂದು ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು. ಆದ್ರೆ ಮಾರ್ಕೆಟಿಂಗ್ ವ್ಯವಸ್ಥೆ ಸರಿ ಇಲ್ಲ ಎಂದು ಚರ್ಮ ಕುಶಲಕರ್ಮಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನೆರೆಯ ಮಹಾರಾಷ್ಟ್ರ ಬ್ರ್ಯಾಂಡ್​ಗೆ ನಮ್ಮ ರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. 

ಇದರ ಬದಲಿಗೆ ಕರ್ನಾಟಕ ಬ್ರ್ಯಾಂಡ್​ನ್ನೇ  ಬೆಳೆಸಬೇಕೆಂಬ ಉದ್ದೇಶದಿಂದ ಅಥಣಿ ಬ್ರ್ಯಾಂಡ್ ಆರಂಭಿಸಲಾಗಿದ್ದು ಇದರ ಮಾರ್ಕೆಟಿಂಗ್​ಗೆ ಕ್ರಮ ವಹಿಸುವಂತೆಯೂ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಹೊರದೇಶದಿಂದ ಚರ್ಮವನ್ನು ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ವಿದೇಶಕ್ಕೆ ಚಪ್ಪಲಿಗಳ ರಫ್ತು ಸ್ಥಗಿತಗೊಳಿಸಿದ್ದರಿಂದ ಚರ್ಮ ಕುಶಲಕರ್ಮಿಗಳ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ ಈಗ ಚರ್ಮದ ಚಪ್ಪಲಿಗಳ ತಯಾರಿಕೆಗೆ ಅತ್ಯಾಧುನಿಕ ಯಂತ್ರೋಪಕರಣಗಳು ಬಂದಿದ್ದು ಯಂತ್ರೋಪಕರಣಗಳ ಖರೀದಿಗೆ ಸರ್ಕಾರ ನೆರವು ನೀಡಬೇಕು. ಮೊದಲಿನಂತೆಯೇ 60;40 ಅನುಪಾತದಡಿ ಸಬ್ಸಿಡಿ ನೀಡುವ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ. 

ಹೋಗು ಅಂದರೆ ಹೋಗೋಕೆ ತಾಳಿ ಕಟ್ಟಿದ ಹೆಂಡತಿ ನಾನಲ್ಲ: ಸಿ.ಎಂ.ಇಬ್ರಾಹಿಂ

ಅಷ್ಟೇ ಅಲ್ಲದೇ ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅತ್ಯುತ್ತಮ ಗುಣಮಟ್ಟದ ಅಥಣಿ ಬ್ರ್ಯಾಂಡ್ ಚಪ್ಪಲಿಗಳ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯಾದ್ಯಂತ 18 ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳು ಇದ್ದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು. ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮವಿದ್ದರೂ ಚರ್ಮ ಕುಶಲಕರ್ಮಿಗಳಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಚರ್ಮ ಕುಶಲಕರ್ಮಿಗಳ ಹಕ್ಕೊತ್ತಾಯ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!