ಕೆಪಿಟಿಸಿಎಲ್‌ ಅಕ್ರಮ: ಉತ್ತರ ಸಿದ್ಧಪಡಿಸುತ್ತಿದ್ದ ಉಪನ್ಯಾಸಕನ ಬಂಧನ

Published : Aug 25, 2022, 02:00 AM IST
ಕೆಪಿಟಿಸಿಎಲ್‌ ಅಕ್ರಮ: ಉತ್ತರ ಸಿದ್ಧಪಡಿಸುತ್ತಿದ್ದ ಉಪನ್ಯಾಸಕನ ಬಂಧನ

ಸಾರಾಂಶ

ಉಪನ್ಯಾಸಕ ಸೇರಿ ವಶದಲ್ಲಿದ್ದ ಮೂವರ ಬಂಧನ, ಬಂಧಿತರ ಸಂಖ್ಯೆ 13ಕ್ಕೆ, ಪ್ರಶ್ನೆಪತ್ರಿಕೆ ಲೀಕ್‌ ಮಾಡಿಸಿ ತೋಟದ ಮನೆಯಲ್ಲಿ ಉತ್ತರ ಬರೆದು ರವಾನೆ

ಬೆಳಗಾವಿ(ಆ.25):  ಕೆಪಿಟಿಸಿಎಲ್‌ ಕಿರಿಯ ಅಭಿಯಂತರ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಮಂಗಳವಾರ ಅತಿಥಿ ಉಪನ್ಯಾಸಕ ಸೇರಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಬುಧವಾರ ಅವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ.

ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಆದೇಶ ಈರಪ್ಪ ನಾಗನೂರಿ (26), ಬೈಲಹೊಂಗಲ ತಾಲೂಕಿನ ನಾವಲಗಟ್ಟಿಗ್ರಾಮದ ಮಡಿವಾಳಪ್ಪ ಬಾಳಪ್ಪ ತೋರಣಗಟ್ಟಿ(36) ಹಾಗೂ ಬೈಲಹೊಂಗಲ ತಾಲೂಕಿನ ಹೊಸಕೋಟಿ ಗ್ರಾಮದ ಶಂಕರ ಕಲ್ಲಪ್ಪ ಉಣಕಲ್‌ (30) ಬಂಧಿತರು. ಆದೇಶ ನಾಗನೂರಿ ಚಿಕ್ಕೋಡಿ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಗದಗ ಮುನ್ಸಿಪಲ್‌ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಿಂದ ಲೀಕ್‌ ಆದ ಪ್ರಶ್ನೆಪತ್ರಿಕೆಯನ್ನು ಹುಕ್ಕೇರಿ ತಾಲೂಕಿನ ಶಿರಹಟ್ಟಿ.ಬಿ.ಕೆ.ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಉತ್ತರಗಳನ್ನು ಸಿದ್ಧಪಡಿಸುತ್ತಿದ್ದ ಎಂಬುದು ತಿಳಿದು ಬಂದಿದೆ.

ಸ್ಮಾರ್ಟ್‌ವಾಚ್ ಬಳಸಿ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ಅಕ್ರಮ: 9 ಜನರ ಬಂಧನ

ಇಲ್ಲಿಂದ ಉತ್ತರಗಳನ್ನು ಪಡೆದು ಮಡಿವಾಳಪ್ಪ ತೋರಣಗಟ್ಟಿಹಾಗೂ ಶಂಕರ ಉಣಕಲ್‌ ಎಂಬುವರು ಚಿಕ್ಕೋಡಿ ಹಾಗೂ ರಾಮದುರ್ಗಕ್ಕೆ ತೆಗೆದುಕೊಂಡು ಹೋಗಿ ಅಲ್ಲಿನ ಗ್ಯಾಂಗ್‌ಗೆ ಹಸ್ತಾಂತರಿಸಿದ್ದರು. ಈ ಉತ್ತರಗಳನ್ನು ಅತ್ಯಾಧುನಿಕ ಬ್ಲೂಟೂತ್‌ ಡಿವೈಸ್‌ಗಳ ಮೂಲಕ ಅಭ್ಯರ್ಥಿಗಳಿಗೆ ನೀಡಬೇಕಿತ್ತು. ಆದರೆ ಬ್ಲೂಟೂತ್‌ಗಳನ್ನು ಬಹುತೇಕ ಹಣಪಡೆದ ಎಲ್ಲ ಅಭ್ಯರ್ಥಿಗಳ ಕೈಗೆ ಒಪ್ಪಿಸುವುದು ವಿಳಂಬವಾದ ಕಾರಣ ಯಾರಾರ‍ಯರಿಗೆ ಬ್ಲೂಟೂತ್‌ ಸಿಕ್ಕಿದೆಯೋ ಅವರಿಗಷ್ಟೇ ರವಾನಿಸುವ ಕಾರ್ಯ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಈ ಅಕ್ರಮದ ಪ್ರಮುಖ ಆರೋಪಿಯಾಗಿರುವ ಸಂಜು ಭಂಡಾರಿ ಸಂಪರ್ಕದಲ್ಲಿದ್ದ ಇನ್ನಿತರ ಆರೋಪಿಗಳು ಹಾಗೂ ಅಭ್ಯರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಈ ಮೂವರ ಸುಳಿವು ಸಿಕ್ಕಿದೆ. ಬಂಧಿತರಿಂದ ಒಂದು ಕಾರು ಮತ್ತು ಅಕ್ರಮಕ್ಕೆ ಬಳಸಿದ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!