
ತುಮಕೂರು (ನ.7): ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಚಿರತೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ನಡೆದಿದೆ.
ಲೇಖನ(7) ಚಿರತೆ ದಾಳಿಗೆ ತುತ್ತಾದ ಮಗು. ರಾಕೇಶ್, ಹರ್ಷಿತಾ ದಂಪತಿಯ ಮಗುವಾಗಿರುವ ಲೇಖನ. ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದ ಚಿರತೆ. ಚಿರತೆ ದಾಳಿ ನಡೆಸುತ್ತಿದ್ದಂತೆ ಕಿರುಚಿಕೊಂಡ ಮಗು. ಮಗು ಮೇಲೆ ದಾಳಿ ನಡೆಸುತ್ತಿದ್ದಂತೆ ಜೋರಾಗಿ ಕೂಗಿಕೊಂಡು ದೊಣ್ಣೆಯಿಂದ ಚಿರತೆಗೆ ಬೆದರಿಸಿದ ರಾಕೇಶ್.
Bengaluru ನಾಲ್ಕು ದಿನ ಆಹಾರವಿಲ್ಲದೇ ಬಳಲಿದ್ದ ಚಿರತೆ ಎದೆಗೆ ಗುಂಡಿಟ್ಟು ಕೊಂದ ಅರಣ್ಯ ಇಲಾಖೆ: ಈ ಸಾವು ನ್ಯಾಯವೇ?
ಎಳೆದೊಯ್ಯಲು ಯತ್ನಿಸಿದ ಚಿರತೆ ಈ ವೇಳೆ ಧೈರ್ಯ ಕಳೆದುಕೊಳ್ಳದೇ ಚಿರತೆ ಮೇಲೆ ದೊಣ್ಣೆಯಿಂದ ದಾಳಿಗೆ ಮುಂದಾದ ತಂದೆ. ಕೂಡಲೇ ಮಗುವನ್ನು ಬಿಟ್ಟು ಓಡಿಹೋದ ಚಿರತೆ. ಸ್ವಲ್ಪ ಧೈರ್ಯಕಳೆದುಕೊಂಡಿದ್ದರೂ ಮಗುವನ್ನು ಎಳೆದೊಯ್ಯುತ್ತಿದ್ದ ಚಿರತೆ. ತಂದೆಯ ಧೈರ್ಯ, ಸಮಯಪ್ರಜ್ಞೆಯಿಂದ ಮಗು ಚಿರತೆ ದಾಳಿಯಿದಾಗಿ ಪ್ರಾಣಾಪಾಯದಿಂದ ಪಾರಾಗಿದೆ. ಬಾಲಕಿಯ ಕಾಲನ್ನು ಪರಚಿರುವ ಚಿರತೆ. ಬೆಳ್ಳಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
ಬೆಂಗಳೂರು ಸೈಟ್ ಮಾಲೀಕರೇ ಎಚ್ಚರ: ಪೊದೆ ಬೆಳೆಸಿಕೊಂಡ್ರೆ ದಂಡ ವಿಧಿಸುತ್ತೆ ಬಿಬಿಎಂಪಿ!.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ