ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಟಿ ರಮ್ಯಾ ಹೇಳಿದ್ದು ಇಷ್ಟು

Published : Aug 02, 2025, 05:12 PM IST
Ramya Prajwal Rev anna

ಸಾರಾಂಶ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಟಿ ರಮ್ಯಾ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಈ ಕುರಿತು ಮಾಜಿ ಸಂಸದೆ, ನಟಿ ರಮ್ಯಾ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಶುಕ್ರವಾರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ ಸಂದರ್ಭದಲ್ಲಿಯೂ ರಮ್ಯಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಮಾಜಿ ಪ್ರಧಾನಿ ದೇವೇಗೌಡ ಕಣ್ಣೀರು

ಮೊಮ್ಮಗ ಪ್ರಜ್ವಲ್ ಪ್ರಕರಣದ ತೀರ್ಪು ಪ್ರಕಟವಾಗುವ ಹಿನ್ನೆಲೆ ಮಾಜಿ ಪ್ರಧಾನಿಗಳಾದ ಹೆಚ್‌ಡಿ ದೇವೇಗೌಡರು ಮಧ್ಯಾಹ್ನದಿಂದಲೇ ಟಿವಿ ನೋಡುತ್ತಾ ಕುಳಿತಿದ್ದರಂತೆ. ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ದೇವೇಗೌಡರು ಕಣ್ಣೀರು ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಪ್ರಜ್ವಲ್ ಪೋಷಕರಾದ ಹೆಚ್‌ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಹ ಆಘಾತಕ್ಕೊಳಗಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಯಾವ ಸೆಕ್ಷನ್‌ಗೆ ಎಷ್ಟು ದಂಡ?

  • ಐಪಿಸಿ 376(2)(k), ಜೀವಾವಧಿ, 5 ಲಕ್ಷ
  • ಐಪಿಸಿ 376(2)(n), - ಜೀವಾವಧಿ, 5 ಲಕ್ಷ
  • ಐಪಿಸಿ 354(a) - 3 ವರ್ಷ ಕಠಿಣ ಜೈಲು, 25 ಸಾವಿರ ದಂಡ
  • ಐಪಿಸಿ 354(b) - 7 ವರ್ಷ ಕಠಿಣ ಜೈಲು, 50ಸಾವಿರ ದಂಡ, ದಂಡ ಪಾವತಿಸದಿದ್ದಲ್ಲಿ 6 ತಿಂಗಳು ಸರಳ ಜೈಲು
  • ಐಪಿಸಿ 354(c) - 3 ವರ್ಷ ಕಠಿಣ ಜೈಲು
  • ಐಪಿಸಿ 506 - 2 ವರ್ಷ ಕಠಿಣ ಜೈಲು 10 ಸಾವಿರ ದಂಡ
  • ಐಪಿಸಿ 201 - 3 ವರ್ಷ ಕಠಿಣ ಜೈಲಿ, 25 ಸಾವಿರ ದಂಡ
  • IT ACt 66(E) - 3 ವರ್ಷ ಕಠಿಣ, 25 ಸಾವಿರ ದಂಡ

ಕೆ ಆರ್‌ ನಗರದ ಮನೆಗೆಲಸದವಳ ಮೇಲಿನ ಅತ್ಯಾ*ಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಈ ಆದೇಶ ಪ್ರಕಟಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!