ರಾಮಾಯಣದ ಸೃಷ್ಟಿಕರ್ತನನ್ನು ಮರೆಯುವುದು ದೊಡ್ಡ ತಪ್ಪು; ರಾಮನಿಗಿಂತ ವಾಲ್ಮೀಕಿ ಶ್ರೇಷ್ಠ: ಮಹದೇವಪ್ಪ

Kannadaprabha News, Ravi Janekal |   | Kannada Prabha
Published : Feb 11, 2026, 12:18 PM IST
HC Mahadevappa

ಸಾರಾಂಶ

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಧರ್ಮಕ್ಕಿಂತ ಬದುಕು ಶ್ರೇಷ್ಠವಾಗಿದ್ದು, ರಾಮಾಯಣದ ಸೃಷ್ಟಿಕರ್ತ ವಾಲ್ಮೀಕಿಯನ್ನೇ ಕಡೆಗಣಿಸಲಾಗುತ್ತಿದೆ ಎಂದು ಹೇಳಿದರು. ವಾಲ್ಮೀಕಿ ಮತ್ತು ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳನ್ನು ಪಾಲಿಸಬೇಕೆಂದರು.

ಹರಿಹರ (ಫೆ.11): ಬದುಕಿಗಿಂತ ಧರ್ಮ ಶ್ರೇಷ್ಠವಲ್ಲ, ಧರ್ಮಕ್ಕಿಂತ ನಮ್ಮ ಬದುಕು ಮತ್ತು ಬದುಕಿಗೆ ಪ್ರೇರಣೆಯಾಗುವ ಸಾಂಸ್ಕೃತಿಕ ನಡೆಗಳೇ ಶ್ರೇಷ್ಠ. ವಾಲ್ಮೀಕಿ ಮತ್ತು ಅಂಬೇಡ್ಕರ್ ಅವರ ವೈಚಾರಿಕ ಚಿಂತನೆಗಳು ಒಂದೇ ಆಗಿವೆ. ಅವರ ಆದರ್ಶದಂತೆ ನಾವೆಲ್ಲರೂ ವೈಚಾರಿಕ ಬದುಕು ಕಟ್ಟಿಕೊಳ್ಳಬೇಕಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಪ್ರತಿಪಾದಿಸಿದರು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಾತ್ರಾ ಮಹೋತ್ಸವದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಮಹರ್ಷಿಗಳು ರಾಮಾಯಣದ ಮೂಲಕ ರಾಮ, ಸೀತೆ, ರಾವಣ ಸೇರಿದಂತೆ ಎಲ್ಲ ಪಾತ್ರಗಳನ್ನು ಸೃಷ್ಟಿಸಿದವರು. ಆದರೆ ಇಂದು ರಾಮನನ್ನು ಮುಂದೆ ತಂದು ಸೃಷ್ಟಿಕರ್ತ ವಾಲ್ಮೀಕಿಯನ್ನೇ ಕಡೆಗಣಿಸಲಾಗುತ್ತಿದೆ. ವಾಲ್ಮೀಕಿ, ಕನಕದಾಸರು ಮತ್ತು ಅಂಬೇಡ್ಕರ್ ಅವರನ್ನು ನಾವು ಒಟ್ಟಾಗಿ ಆರಾಧಿಸದಿದ್ದರೆ ಶೋಷಿತ ಸಮುದಾಯಕ್ಕೆ ಅಪಾಯವಿದೆ ಎಂದು ಎಚ್ಚರಿಸಿದರು.

ಸಂವಿಧಾನ ನಮಗೆ ಸಮಾನ ಅವಕಾಶಗಳನ್ನು ನೀಡಿದ್ದರೂ ಅವು ಇನ್ನೂ ಪೂರ್ಣವಾಗಿ ಸಾಧಿತವಾಗಿಲ್ಲ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ- ಕಾಲೇಜುಗಳಲ್ಲಿ ಸಂವಿಧಾನ ಪಠಣಕ್ಕೆ ಅವಕಾಶ ಮಾಡಿಕೊಡುವ ಮೂಲಕ ಶೋಷಿತರ ಹಿತರಕ್ಷಣೆಗೆ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ,ವಾಲ್ಮೀಕಿ ಜಾತ್ರೆಯು ಸಮುದಾಯವನ್ನು ಸಾಮಾಜಿಕವಾಗಿ ಮೇಲೆತ್ತುವ ಮಹಾವೇದಿಕೆಯಾಗಿದೆ. ಕಳೆದ ಹತ್ತು ವರ್ಷಗಳಿಂದ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದರೂ, ನಿರೀಕ್ಷಿತ ಗುರಿ ತಲುಪಲು ಇವುಗಳನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು. ಬರುವ ಬಜೆಟ್‌ನಲ್ಲಿ ಸಮುದಾಯದ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಹಿಂದುಳಿದ ವರ್ಗಗಳ ಮಕ್ಕಳು ಅವಲಂಬಿಸಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಬಡವರಿಗೆ ಆಧಾರವಾಗಿರುವ ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಎಸ್.ಸಿ/ಎಸ್.ಟಿ ಸಮುದಾಯದ ಬಡವರಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಡಲು ಅಂಬೇಡ್ಕರ್ ಹಾಗೂ ವಾಲ್ಮೀಕಿ ಕಾಲೋನಿ ನಿರ್ಮಾಣಕ್ಕಾಗಿ ತಲಾ ₹20 ಕೋಟಿಯಂತೆ ಒಟ್ಟು ₹40 ಕೋಟಿ ರೂ. ಅನುದಾನದ ಯೋಜನೆಗೆ ಅನುಮೋದನೆ ನೀಡಬೇಕೆಂದು ಕೋರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2028ರವರೆಗೂ ಸಿದ್ದರಾಮಯ್ಯ ಫಿಕ್ಸ್: ಆಮೇಲೆ ಬೀದಿ ದಾಸಯ್ಯನ್ನ ಸಿಎಂ ಮಾಡಿದ್ರೂ ಒಕೆ' ಜಮೀರ್ ಸ್ಫೋಟಕ ಹೇಳಿಕೆ!
River Indie-ರಿವರ್ ಇಂಡಿ ಯಶೋಗಾಥೆ: ಯಮಹಾದೊಂದಿಗೆ ಇ-6 ಹೊಸ ಆವೃತ್ತಿ ಬಿಡುಗಡೆ, ತಿಂಗಳಿಗೆ 8 ಸಾವಿರ ಸ್ಕೂಟರ್ ನಿರ್ಮಾಣ