
ಬೆಂಗಳೂರು (ಅ.12): ಮಕ್ಕಳಿಗೆ ವಿದ್ಯೆಯನ್ನು ಯಾವಾಗ ಬೇಕಾದರೂ ಕಲಿಸಬಹುದು. ವಿದ್ಯೆಗಿಂತಲೂ ಜೀವ ಮುಖ್ಯ.
ಹೀಗಾಗಿ ಸದ್ಯಕ್ಕೆ ಶಾಲೆಗಳನ್ನು ತೆರೆಯುವುದು ಬೇಡ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಹೇಳಿದ್ದಾರೆ.
ಒಂದು ವರ್ಷ ತರಗತಿ ನಡೆದಿಲ್ಲ ಎಂದರೆ ಏನೂ ಆಗುವುದಿಲ್ಲ. ನಾನು 4ನೇ ತರಗತಿವರೆಗೆ ಓದಲೇ ಇಲ್ಲ. ಹದಿಮೂರು ಬಜೆಟ್ಗಳನ್ನು ಮಂಡಿಸಿದ್ದೇನೆ. ನಾನೇನು ದಡ್ಡನಾ? ತರಗತಿಗಳಿಗೆ ಹಾಜರಾಗುವುದಕ್ಕಿಂತ ಜೀವ ಉಳಿಸುವುದು ಮುಖ್ಯ.
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ: ಹಿಗ್ಗಾಮುಗ್ಗಾ ವಾಗ್ದಾಳಿ..!
ಪುಟ್ಟಮಕ್ಕಳನ್ನು ಕೊರೋನಾ ಸೋಂಕು ಭಾರೀ ಏರಿಕೆಯಾಗಿರುವ ಸಮಯದಲ್ಲಿ ಶಾಲೆಗಳಿಗೆ ಕಳುಹಿಸುವುದು ಬೇಡ. ಈ ಬಗ್ಗೆ ಸರ್ಕಾರಕ್ಕೂ ಪತ್ರ ಬರೆದಿದ್ದೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ