ಕಳೆದ ವರ್ಷದಿಂದ ಜೀವ ಬೆದರಿಕೆ: ರಕ್ಷಣೆ ಕೋರಿ ಸಾಹಿತಿಗಳಿಂದ ಸರ್ಕಾರಕ್ಕೆ ಮೊರೆ!

Published : Aug 18, 2023, 04:42 AM IST
ಕಳೆದ ವರ್ಷದಿಂದ ಜೀವ ಬೆದರಿಕೆ: ರಕ್ಷಣೆ ಕೋರಿ ಸಾಹಿತಿಗಳಿಂದ ಸರ್ಕಾರಕ್ಕೆ ಮೊರೆ!

ಸಾರಾಂಶ

ರಾಜ್ಯದ ಹಲವು ಲೇಖಕರು, ಸಾಹಿತಿಗಳಿಗೆ ಕಳೆದ ಒಂದು ವರ್ಷದಿಂದ ಜೀವ ಬೆದರಿಕೆ ಪತ್ರ ಬರುತ್ತಿದ್ದು ರಕ್ಷಣೆ ನೀಡುವಂತೆ ಸರ್ಕಾರದ ಮೊರೆ ಹೋಗಿದ್ದಾರೆ.

ಬೆಂಗಳೂರು (ಆ.18) :  ರಾಜ್ಯದ ಹಲವು ಲೇಖಕರು, ಸಾಹಿತಿಗಳಿಗೆ ಕಳೆದ ಒಂದು ವರ್ಷದಿಂದ ಜೀವ ಬೆದರಿಕೆ ಪತ್ರ ಬರುತ್ತಿದ್ದು ರಕ್ಷಣೆ ನೀಡುವಂತೆ ಸರ್ಕಾರದ ಮೊರೆ ಹೋಗಿದ್ದಾರೆ. ಚಿಂತಕ ಪ್ರೊ.ಕಲ್ರ್ಬುಗಿ, ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆಯ ಬಳಿಕ ಈಗ ಪುನಃ ಕೋಮುವಾದ, ಜಾತಿವಾದ, ಮೌಢ್ಯ ವಿರೋಧಿಸುವ ಲೇಖಕರು, ಬುದ್ಧಿ ಜೀವಿಗಳಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಪತ್ರ ಬರೆದಿರುವ ಸಾಹಿತಿಗಳು ಭೇಟಿಗೆ ಅವಕಾಶ ನೀಡಬೇಕು, ಸೂಕ್ತ ರಕ್ಷಣೆ ನೀಡಬೇಕು, ಬೆದರಿಕೆ ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆ.19 ರಂದು ಸಾಹಿತಿಗಳ ನಿಯೋಗದ ಭೇಟಿಗೆ ಪರಮೇಶ್ವರ್‌ ಅವರು ಸಮಯಾವಕಾಶ ನೀಡಿದ್ದಾರೆ.

ನಾವು ಸಂವಿಧಾನದ ಬಲದಲ್ಲಿದ್ದೀವಾ, ನೆರಳಲ್ಲಿದ್ದೀವಾ ಎಂಬ ಅರಿವು ಅಗತ್ಯ: ಹಂಸಲೇಖ

ಒಂದು ಗುಂಪಿನ ಕೆಲಸ:

ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಾಹಿತಿ ಪ್ರೊ.ಕೆ.ಮರುಳಸಿದ್ದಪ್ಪ(Pro K marulasiddappa), ಕಳೆದ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬರುತ್ತಿವೆ. ಗೌರಿ ಲಂಕೇಶ್‌, ಕಲ್ಬುರ್ಗಿ ಅವರಿಗಾದಂತೆ(ಹತ್ಯೆ) ನಿಮಗೂ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಯಾರೋ ಒಬ್ಬರೆ ಸರಣಿ ಪತ್ರಗಳನ್ನು ಬರೆಯುತ್ತಿದ್ದಾರೆ. ಇದರ ಹಿಂದೆ ಒಂದು ಗುಂಪು ಕೆಲಸ ಮಾಡುತ್ತಿದೆ ಎಂದರು. ಸಾಹಿತಿ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಮಾತನಾಡಿ, ಹಿಂದಿನ ಸರ್ಕಾರವಿದ್ದಾಗಲೂ ಜೀವ ಬೆದರಿಕೆ ಪತ್ರಗಳು ಬರುತ್ತಿದ್ದವು. ಈಗಲೂ ಅದು ಮುಂದುವರೆದಿದೆ. ಸರ್ಕಾರ ಪೊಲೀಸ್‌ ಭದ್ರತೆ ನೀಡುತ್ತೇವೆ ಎಂದಾಗ ನಿರಾಕರಿಸಿದ್ದೆ. ಈ ರೀತಿ ಬೆದರಿಕೆ ಹಾಕುವುದಕ್ಕೆ ಅಂತ್ಯ ಹಾಡಬೇಕಿದೆ ಎಂದು ಒತ್ತಾಯಿಸಿದರು.

ಚಂದ್ರಯಾನ-3 ಯಶಸ್ವಿಗೆ ತಿರುಪತಿ ತಿಮ್ಮಪ್ಪನ ದರ್ಶನ; ಇಸ್ರೋ ವಿಜ್ಞಾನಿಗಳ ನಡೆಗೆ ಪ್ರಗತಿಪರ ಸಾಹಿತಿಗಳು ಖಂಡನೆ

ಭದ್ರತೆಗೆ ಸೂಚನೆ

ಸಾಹಿತಿಗಳಿಗೆ ಯಾರು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿಲ್ಲ. ಸಾಹಿತಿಗಳಿಗೆ ರಕ್ಷಣೆ ನೀಡಲು ಈಗಾಗಲೇ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು ಮತ್ತು ನಗರ ಪೊಲೀಸ್‌ ಆಯುಕ್ತರಿಗೂ ಸೂಚನೆ ನೀಡಿದ್ದೇನೆ.

ಡಾ.ಜಿ.ಪರಮೇಶ್ವರ್‌, ಗೃಹ ಸಚಿವ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!