ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಇಂದೇ ಎಫ್‌ಐಆರ್‌, ಎಲ್ಲರ ಚಿತ್ತ ಮೈಸೂರಿನತ್ತ..!

Published : Sep 27, 2024, 07:44 AM IST
ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಇಂದೇ ಎಫ್‌ಐಆರ್‌, ಎಲ್ಲರ ಚಿತ್ತ ಮೈಸೂರಿನತ್ತ..!

ಸಾರಾಂಶ

ಇಂದು ಬೆಳಿಗ್ಗೆ 10.30 ಗಂಟೆ ನಂತರ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿಲಿದ್ದಾರೆ.  ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಸೇರಿ ಇತರರ ಮೇಲೆ ದೂರು ದಾಖಲಾಗಿದೆ. 

ಮೈಸೂರು(ಸೆ.27):  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದೇ ಎಫ್‌ಐಆರ್‌ ದಾಖಲಾಗುವ ಸಾಧ್ಯತೆ ಇದೆ, ಹೌದು, ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ. 

ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ಅವರು ಕೋರ್ಟ್ ಆದೇಶ ಪಡೆದೆ ಮೈಸೂರಿಗೆ ಮರಳಿದ್ದಾರೆ.  ಕೋರ್ಟ್ ಆದೇಶದೊಂದಿಗೆ ನಿನ್ನೆ(ಗುರುವಾರ) ರಾತ್ರಿ 11 ಗಂಟೆಗೆ ಮೈಸೂರಿಗೆ ಆಗಮಿಸಿದ್ದಾರೆ. 

ಸ್ವಯಂಪ್ರೇರಿತ ತನಿಖಾ ಅಧಿಕಾರಕ್ಕೆ ರಾಜ್ಯದ ಕತ್ತರಿ: ಸಿಬಿಐ ಮೇಲೆಯೇ ಸಿದ್ದರಾಮಯ್ಯ ದಾಳಿ..!

ಇಂದು ಬೆಳಿಗ್ಗೆ 10.30 ಗಂಟೆ ನಂತರ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿಲಿದ್ದಾರೆ.  ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಸೇರಿ ಇತರರ ಮೇಲೆ ದೂರು ದಾಖಲಾಗಿದೆ. 
14 ಸೈಟ್ ವಿಚಾರದಲ್ಲಿ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಮಾಡಬೇಕಿದೆ. ಹೀಗಾಗಿ ಎಲ್ಲರ ಚಿತ್ತ ಮೈಸೂರು ಲೋಕಾಯುಕ್ತದತ್ತ ನೆಟ್ಟಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ