ಕರ್ನಾಟಕದ 23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌

Published : Aug 21, 2024, 07:59 AM IST
ಕರ್ನಾಟಕದ 23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್‌

ಸಾರಾಂಶ

ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು(ಆ.21):  ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರಲ್ಲಿ ಭಾರೀ ಮಳೆ; ಆಟೋ ಮೇಲೆ ಬಿದ್ದ ಬೃಹತ್ ಮರ! ಚಾಲಕ, ಪ್ರಯಾಣಿಕರಿಗೆ ಗಾಯ!

ಗುರುವಾರದಿಂದ ಉತ್ತರ ಒಳನಾಡು ಭಾಗದ ಜಿಲ್ಲೆಗಳು, ಶುಕ್ರವಾರದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ಗಂಗಾವತಿಯಲ್ಲಿ 9 ಸೆಂ.ಮೀ. ಮಳೆ:

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಪ್ರಕಾರ ಕಳೆದ 24 ಗಂಟೆಯಲ್ಲಿ ಗಂಗಾವತಿ, ಬೆಳ್ಳೂರು ಹಾಗೂ ಕುರ್ಡಿಯಲ್ಲಿ ಅತಿ ಹೆಚ್ಚು 9 ಸೆಂ.ಮೀ ಮಳೆಯಾಗಿದೆ. ಕಂಪ್ಲಿ 8, ಗಂಗಾವತಿ ಅರ್ಗೆ, ಮಾನ್ವಿ, ಕುಡತಿನಿಯಲ್ಲಿ ತಲಾ 7, ರಾಯಚೂರು, ಮಸ್ಕಿ, ಸಿರುಗುಪ್ಪ, ಗುಬ್ಬಿ, ಬಾಳೆಹೊನ್ನೂರು, ಕಡೂರಿನಲ್ಲಿ ತಲಾ 6, ಹುಣಸಗಿ, ಅಡಕಿ, ಲೋಂಡಾ, ಹೊಸಪೇಟೆ, ಗೌರಿಬಿದನೂರು, ಬಳ್ಳಾರಿ, ಹರಪನಹಳ್ಳಿಯಲ್ಲಿ ತಲಾ 5, ಕುಮಟಾ, ಸೇಡಂ, ಚಿಟಗುಪ್ಪ, ಹುಮನಾಬಾದ್‌, ದಾವಣಗೆರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಚಾಮರಾಜನಗರ ಹಾಗೂ ಕೃಷ್ಣರಾಜಪೇಟೆಯಲ್ಲಿ ತಲಾ 4 ಸೆಂ.ಮೀ ಮಳೆಯಾದ ವರದಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ