ಈ ಸಾರಿ ಗಣೇಶನ ಹಬ್ಬಕ್ಕೆ ಮಳೆ ಕಾಡೋ ಸಾಧ್ಯತೆ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

Published : Aug 31, 2024, 05:28 PM ISTUpdated : Aug 31, 2024, 05:47 PM IST
ಈ ಸಾರಿ ಗಣೇಶನ ಹಬ್ಬಕ್ಕೆ ಮಳೆ ಕಾಡೋ ಸಾಧ್ಯತೆ: ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ

ಸಾರಾಂಶ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಬೀದರ್, ಬಳ್ಳಾರಿ, ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್, ಕೆಲವು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು(ಆ.31):  ಬಂಗಾಳ ಸಾಗರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಇಂದಿನಿಂದ ಸೆ. 4 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. 

ಸೆಪ್ಟೆಂಬರ್ 1 ರಂದು ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಪೂರ್ವ ಅರಬ್ಬೀ ಸಮುದ್ರದ ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಕೇರಳದ ಜಿಲ್ಲೆಗಳಲ್ಲಿ ಟ್ರಪ್ ಮುಂದುವರೆದಿದೆ. ಹೀಗಾಗಿ ಕರಾವಳಿ ತೀರದಲ್ಲಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 4 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.  

Cyclone Asna: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ, ರಾಜ್ಯ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ!

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಬೀದರ್, ಬಳ್ಳಾರಿ, ಯಾದಗಿರಿ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಭಾರೀ ಮಳೆ ಜೊತೆಗೆ ಆರೇಂಜ್ ಅಲರ್ಟ್, ಕೆಲವು ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಈ ಬಾರಿ ಗಣೇಶ ಚತುರ್ಥಿ 7 ಸೆಪ್ಟೆಂಬರ್ 2024 ರಂದು ಬಂದಿದೆ. 17 ಸೆಪ್ಟೆಂಬರ್ 2024 ರಂದು ಅನಂತ ಚತುರ್ದಶಿಯಂದು ಕೊನೆಗೊಳ್ಳುತ್ತದೆ. ಈ ದಿನ, ಗಣಪತಿಯ ನೀರಿನಲ್ಲಿ ವಿಸರ್ಜನೆ ಮಾಡುವ ಮೂಲಕ ಗಣಪತಿಗೆ ಬೀಳ್ಕೊಡಲಾಗುತ್ತದೆ. 

ಗಣೇಶೋತ್ಸವಕ್ಕೆ ವರುಣ ಅಡ್ಡಿ?

ಗಣೇಶೋತ್ಸವದಂದು ರಾಜ್ಯಾದ್ಯಂತ ಎಲ್ಲ ಕಡೆ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನ ಆಯೋಜಿಸಲಾಗುತ್ತದೆ. ಆದರೆ, ಈ ಬಾರಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಸೆ. 5ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸೆ. 5 ರ ನಂತರವೂ ಮಳೆ ಹೀಗೆ ಮುಂದುವರಿದರೆ ಗಣೇಶೋತ್ಸವದಂದು ಆಯೋಜಿಸುವ ಕಾರ್ಯಕ್ರಮ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಅಡಚಡೆ ಉಂಟಾಗುವ ಸಾಧ್ಯತೆ ಇದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
Karnataka News Live: ಮಾಟಗಾತಿಯ ಮಾತು ಕೇಳಿ ಗಂಡು ಮಗುವಿಗಾಗಿ ಪತ್ನಿಯ ತಲೆ ಕೂದಲು ಕತ್ತರಿಸಿದ ಪತಿ