
ಬೆಂಗಳೂರು(ಜ.19): ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಕೆಲವಡೆ ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಹೀಗಾಗಿ, ದಕ್ಷಿಣ ಒಳನಾಡಿನ ಹಲವು ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ತುಂತುರು ಮಳೆ ಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿಂದು ವರ್ಷದ ಮೊದಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಉಳಿದಂತೆ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಮಂಜು ಮುಸುಕಿನ ವಾತಾವರಣ ಇರಲಿದೆ. ಮಂಗಳವಾರದಿಂದ ಬಹುತೇಕ ರಾಜ್ಯದಲ್ಲಿ ಒಣ ಹವೆ ಇರಲಿದೆ. ರಾಜ್ಯದ ಒಳನಾಡಿನ ಕೆಲವಡೆ ಮಂಜು ಮುಸುಕಿನ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ