
ಬೆಂಗಳೂರು(ಸೆ.30): ಕಳೆದ ಕೆಲ ದಿನಗಳಿಂದ ಅಬ್ಬರ ಕಳೆದುಕೊಂಡಿದ್ದ ಮುಂಗಾರು ಮತ್ತೆ ಬಿರುಸು ಪಡೆದುಕೊಳ್ಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಕೇಂದ್ರ ನೀಡಿದೆ.
ಇಂದು(ಶುಕ್ರವಾರ) ಬೆಳಗ್ಗೆ 8.30ರ ತನಕ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ರಾಯಚೂರು, ದಾವಣಗೆರೆ, ರಾಮನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಇಂದು ಬೆಳಗ್ಗೆ 8.30ರಿಂದ ಶನಿವಾರದವರೆಗೆ ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಕೊಪ್ಪಳ, ಗದಗ, ರಾಯಚೂರು, ಬಾಗಲಕೋಟೆ, ಧಾರವಾಡ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
Chitradurga: ಅಕಾಲಿಕ ಮಳೆಗೆ ಸುಮಾರು 71153 ಹೆಕ್ಟೇರ್ ಬೆಳೆ ನಾಶ: ಕಂಗಾಲಾದ ಅನ್ನದಾತ
ನಿನ್ನೆ(ಗುರುವಾರ) ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ನೈಋುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಒಳನಾಡಿನ ಕೆಲವೆಡೆ ಮಳೆಯಾಗಿದ್ದರೆ ಕರಾವಳಿಯಲ್ಲಿ ಒಣಹವೆಯಿತ್ತು.
ಯಾದಗಿರಿಯ ಕಕ್ಕೆರಿಯಲ್ಲಿ 3 ಸೆಂ.ಮೀ., ಬೀದರ್ನ ಹಲಬರ್ಗ 2, ರಾಯಚೂರಿನ ಮಾನ್ವಿ, ಮುದ್ಗಲ್, ಬೀದರ್ನ ಹುಮ್ನಾಬಾದ್, ಹಳ್ಳಿಖೇಡ್, ಕಲಬುರಗಿಯ ಚಿಂಚೋಳಿಯಲ್ಲಿ ತಲಾ ಒಂದು ಸೆಂ. ಮೀ. ಮಳೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ