ಕಾಂಗ್ರೆಸ್‌ ಗ್ಯಾರಂಟಿ ಯೋಜನೆ: ಅನ್ನಭಾಗ್ಯದಡಿ ಹಣಭಾಗ್ಯ ಬಂದ್‌?

Published : Aug 22, 2024, 10:08 AM IST
ಕಾಂಗ್ರೆಸ್‌ ಗ್ಯಾರಂಟಿ ಯೋಜನೆ: ಅನ್ನಭಾಗ್ಯದಡಿ ಹಣಭಾಗ್ಯ ಬಂದ್‌?

ಸಾರಾಂಶ

ಸನ್ನಿಹಿತ ಹಣದ ಬದಲು ಹೆಚ್ಚುವರಿ 5 ಕೇಜಿ ಅಕ್ಕಿ ಪೂರೈಸಲು ರಾಜ್ಯದ ಸರ್ಕಾರದ ತಯಾರಿ ಕೇಂದ್ರದಿಂದ 28 ರು.ಗೆ ಸರ್ಕಾರಕ್ಕೆ ಅಕ್ಕಿ | ರಾಜ್ಯಕ್ಕೆ 144 ಕೋಟಿ ರು. ಉಳಿತಾಯ

ಬೆಂಗಳೂರು(ಆ.22):  ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಇನ್ನು ಮುಂದೆ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿಯ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. 

ಈ ಹಿಂದೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಇದೀಗ ರಾಜ್ಯಕ್ಕೆ ಕೆ.ಜಿ.ಗೆ 28 ರು.ನಂತೆ 2025ರ ಮಾರ್ಚ್‌ವರೆಗೆ ಪ್ರತಿ ತಿಂಗಳು 2.36 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡಲು ಒಪ್ಪಿಗೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ತಲಾ 10 ಕೆ.ಜಿ. ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಆಸೆ ಈಡೇರಲಿದ್ದು, ಈಗಾಗಲೇ ಪ್ರಕ್ರಿಯೆ ಆರಂಭಗೊಂಡಿದೆ. 

ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಳುಹಿಸಿರುವ ಪ್ರಸ್ತಾವನೆಗೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಒಪ್ಪಿಗೆ ಕೊಟ್ಟಿದೆ. ಹೀಗಾಗಿ, ಶೀಘ್ರದಲ್ಲೇ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ ಬದಲು ಉಚಿತವಾಗಿ ಅಕ್ಕಿ ದೊರೆಯಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್ ಎಸ್ಎ) ಅನ್ವಯದಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯದ1,16,95,029 ಬಿಪಿಎಲ್, 10,88,421 ಅಂತ್ಯೋದಯ ಕಾರ್ಡ್‌ಗಳಿಗೆ ಉಚಿತವಾಗಿ ಆಹಾರ ಪದಾರ್ಥ ವಿತರಿಸುತ್ತಿದೆ. ಹಾಗಾಗಿ, ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯನಿಗೆ 3 ಕೆ.ಜಿ. ಅಕ್ಕಿ, 2 ಕೆ.ಜಿ. ರಾಗಿ ಸೇರಿ ಒಟ್ಟು 5 ಕೆ.ಜಿ. ಹಾಗೂ ಪ್ರತಿ ಅಂತ್ಯೋದಯ ಕಾರ್ಡ್‌ಗೆ 20 ಕೆ.ಜಿ. ಅಕ್ಕಿ, 15 ಕೆ.ಜಿ. ರಾಗಿ ಸೇರಿ ಒಟ್ಟು 35 ಕೆ.ಜಿ. ಆಹಾರ ಪದಾರ್ಥ ಉಚಿತವಾಗಿ ಸಿಗುತ್ತಿದೆ. ಇದೀಗ ರಾಜ್ಯವು ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಸದಸ್ಯನಿಗೆ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಅಕ್ಕಿ ನೀಡಿದರೆ ಒಟ್ಟು 10 ಕೆ.ಜಿ. ಆಹಾರ ಪದಾರ್ಥ ಸಿಕ್ಕಿದಂತಾಗುತ್ತದೆ. 

ರಾಜ್ಯಕ್ಕೆ 144 ಕೋಟಿ ರು. ಉಳಿತಾಯ: 

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್‌ನ ಪ್ರತಿ ಸದಸ್ಯನಿಗೆ ಕೆ.ಜಿ.ಗೆ 34 ರು.ನಂತೆ 5 ಕೆ.ಜಿ. ಅಕ್ಕಿಗೆ 170 ರು. ಹಣವನ್ನು ನೀಡಲಾಗುತ್ತಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಏರ್‌ಪೋರ್ಟ್‌ ಪಿಕ್-ಅಪ್ ನಿಯಮ ಸಡಿಲಿಕೆ: ಫ್ರೀ ಪಾರ್ಕಿಂಗ್ 15 ನಿಮಿಷಕ್ಕೆ ವಿಸ್ತರಣೆ!
ಬೇರೆಯದನ್ನು ಬಿಟ್ಟು, 120 ಅಡಿಕೆ ಮರಗಳನ್ನು ಅರಣ್ಯ ಇಲಾಖೆ ಕಡಿದಿದ್ದು ಯಾಕೆ? ಅನಂತಮೂರ್ತಿ ಹೆಗಡೆ ಆಕ್ರೋಶ