ಕೆಎಎಸ್‌ ಪ್ರಶ್ನೆಪತ್ರಿಕೆಯಲ್ಲಿ ಸಾಲುಸಾಲು ದೋಷಗಳು: ಅಭ್ಯರ್ಥಿಗಳು ಕಂಗಾಲು, ತೀವ್ರ ಆಕ್ರೋಶ

Published : Aug 29, 2024, 08:44 AM IST
ಕೆಎಎಸ್‌ ಪ್ರಶ್ನೆಪತ್ರಿಕೆಯಲ್ಲಿ ಸಾಲುಸಾಲು ದೋಷಗಳು: ಅಭ್ಯರ್ಥಿಗಳು ಕಂಗಾಲು, ತೀವ್ರ ಆಕ್ರೋಶ

ಸಾರಾಂಶ

384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಮಂಗಳವಾರ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿನ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ಲೋಪ-ದೋಷಗಳನ್ನು ಪತ್ತೆಹಚ್ಚಿರುವ ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು (ಆ.29): 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಮಂಗಳವಾರ ನಡೆದ ಪೂರ್ವಭಾವಿ ಪರೀಕ್ಷೆಯಲ್ಲಿನ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ಲೋಪ-ದೋಷಗಳನ್ನು ಪತ್ತೆಹಚ್ಚಿರುವ ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಒಂದೇ ಪ್ರಶ್ನೆಗೆ ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಬೇರೆ ಬೇರೆ ಅರ್ಥ ಬರುವಂತೆ ಬರೆದಿರುವುದು, ಇಸವಿಯಲ್ಲಿ ಲೋಪ, ಪುನರಾವರ್ತನೆ, ವಾಕ್ಯ ರಚನೆಯಲ್ಲಿ ಲೋಪ, ಗೊಂದಲ ಮತ್ತು ಅಸಂಬದ್ಧ ವಾಕ್ಯ ರಚನೆ, ತದ್ವಿರುದ್ಧ ಅರ್ಥ ಬರುವಂತೆ ಅನುವಾದ ಮಾಡಿರುವುದು ಸೇರಿದಂತೆ ಅನೇಕ ಗೊಂದಲಗಳು ಪ್ರಶ್ನೆಪತ್ರಿಕೆಯಲ್ಲಿ ಕಂಡುಬಂದಿವೆ

ರಾಜ್ಯದ ಎಲ್ಲ ಡ್ಯಾಂಗಳು ಸುರಕ್ಷಿತ: ತುಂಗಾರತಿ ಮಾದರಿಯಲ್ಲಿ ಕೃಷ್ಣಾರತಿ ಎಂದ ಡಿಕೆಶಿ

ಏನೇನು ದೋಷ?
- ‘ಲೋಕ್ ಅದಾಲತ್ ಅಧಿನಿಯಮ -2002 (ತಿದ್ದುಪಡಿ)’ ಎಂಬುದರ ಇಂಗ್ಲಿಷ್‌ ಪ್ರಶ್ನೆ ಸರಿಯಿದ್ದು, ಕನ್ನಡದಲ್ಲಿ ‘2022’ ಎಂದು ಮುದ್ರಿಸಲಾಗಿದೆ.

- ದೊಡ್ಡ ಗಾತ್ರದ ಕೊಕ್ಕರೆಗೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಹೇಳಿಕೆಗಳು ಸರಿಯಾಗಿವೆ? ಎಂದು ಪ್ರಶ್ನೆ ಕೇಳಿ, ಅದಕ್ಕೆ ಮೊದಲನೇ ಹೇಳಿಕೆ, ‘ಇದು ಅತ್ಯಂತ ವೇಗವಾಗಿ ಹಾರಾಡುವ ಪಕ್ಷಿಗಳಲ್ಲಿ ಒಂದಾಗಿದೆ’ ಎಂದು ಕನ್ನಡದಲ್ಲಿ ಕೇಳಿದ್ದರೆ, ಇಂಗ್ಲಿಷ್‌ನಲ್ಲಿ Heaviest (ಭಾರದ) ಎಂದು ಕೇಳಿ ಗೊಂದಲ ಮೂಡಿಸಲಾಗಿದೆ.

ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಭಾರಿ ಪ್ರತಿಭಟನೆ, ಹಿಂಸಾಚಾರ

- ವಿವರಣಾತ್ಮಕವಾಗಿರುವ ವಾಕ್ಯದ ಪ್ರಶ್ನೆಯೊಂದಕ್ಕೆ, ಕನ್ನಡದಲ್ಲಿ ‘ರಾಜ್ಯಸಭೆಯ ಸಾರ್ವತ್ರಿಕ ಚುನಾವಣೆ’ ಎಂದು ಮುದ್ರಿಸಲಾಗಿದ್ದು, ಇಂಗ್ಲಿಷ್‌ನಲ್ಲಿ State Assembly (ರಾಜ್ಯದ ವಿಧಾನಸಭೆ) ಎಂದು ಮುದ್ರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ