ಕರ್ನಾಟಕ ಅಬಕಾರಿ ಇಲಾಖೆಯಿಂದ ಹೊರ ಬಿತ್ತು ಮತ್ತೊಂದು ಹೊಸ ಆದೇಶ..!

Published : Apr 19, 2020, 03:41 PM IST
ಕರ್ನಾಟಕ ಅಬಕಾರಿ ಇಲಾಖೆಯಿಂದ ಹೊರ ಬಿತ್ತು ಮತ್ತೊಂದು ಹೊಸ ಆದೇಶ..!

ಸಾರಾಂಶ

ಬಹು ದಿನಗಳಿಂದ ಕಾಯುತ್ತಿರುವ ನಾಲಿಗೆಗೆ ಮದ್ಯದ ರುಚಿ ತೋರಿಸಬಹುದು ಎಂದುಕೊಂಡವರಿಗೆ ಅಬಕಾರಿ ಇಲಾಖೆ ಮತ್ತೆ ಶಾಕ್ ಕೊಟ್ಟಿದೆ.

ಬೆಂಗಳೂರು, (ಏ.19): ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಕಾರಣದಿಂದ ಲಾಕ್ ಡೌನ್ ಅನ್ನು ಮೇ.3ರ ವರೆಗೆ ಮುಂದೂಡಿಕೆಯಾಗಿದೆ. 

ಹೀಗಾಗಿ ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಮೇ.3ರ ವರೆಗೆ ಮುಂದುವರಿಸಿ ಅಬಕಾರಿ ಇಲಾಖೆ ಆದೇಶಿಸಿದೆ. ಈ ಹಿಂದೆ ಎಪ್ರಿಲ್ 20ವರೆಗೆ ಎಲ್ಲಾ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಲಾಗಿತ್ತು. 

ಮಂಗಳವಾರ ಮದ್ಯಪ್ರಿಯರಿಗೆ ಸಿಗುತ್ತಾ ಗುಡ್‌ನ್ಯೂಸ್‌..? 

ಈಗ ಲಾಕ್ ಡೌನ್ ಮುಂದುವರಿಕೆಯಾದ ಕಾರಣ ಮದ್ಯ ಮಾರಾಟವನ್ನು ಮೇ.3ರ ವರೆಗೆ ನಿಷೇಧಿಸಿ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಮದ್ಯ ಸಿಗದೆ ಪರಿತಪಿಸುತ್ತಿರುವ ಮದ್ಯ ಪ್ರಿಯರಿಗೆ ಏಪ್ರಿಲ್ 20ರ ಸೋಮವಾರ ಲಾಕ್‌ಡೌನ್ ನಿರ್ಬಂಧ ಸಡಿಲವಾಗುತ್ತದೆ. ಎಂಎಸ್‌ಐಎಲ್ ಮಳಿಗೆಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಸಿಗುತ್ತದೆ.

ಬಹು ದಿನಗಳಿಂದ ಕಾಯುತ್ತಿರುವ ನಾಲಿಗೆಗೆ ಮದ್ಯದ ರುಚಿ ತೋರಿಸಬಹುದು ಎಂದುಕೊಂಡವರಿಗೆ ಅಬಕಾರಿ ಇಲಾಖೆ ಮತ್ತೆ ಶಾಕ್ ಕೊಟ್ಟಿದೆ. ಇದರಿಂದ ಮದ್ಯವ್ಯಸನಿಗಳು ಮೇ.03ರ ವರೆಗೆ ಕಾಯಲೇ ಬೇಕು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ
ದ್ವೇಷ ಭಾಷಣಕ್ಕೆ 7 ವರ್ಷ ಜೈಲು: ವಿಧೇಯಕ ಮಂಡಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌