ಗಾಂಧಿ ಜಯಂತಿಯಿಲ್ಲ, ಚುನಾವಣೆಯಿಲ್ಲ ಆದ್ರೂ ನ.20ರಂದು ಎಣ್ಣೆ ಸಿಗೊಲ್ಲ!

Published : Nov 14, 2024, 01:40 PM IST
ಗಾಂಧಿ ಜಯಂತಿಯಿಲ್ಲ, ಚುನಾವಣೆಯಿಲ್ಲ ಆದ್ರೂ ನ.20ರಂದು ಎಣ್ಣೆ ಸಿಗೊಲ್ಲ!

ಸಾರಾಂಶ

ರಾಜ್ಯದಲ್ಲಿ ನ.20ರಂದು ಮದ್ಯ ಮಾರಾಟಗಾರರು ಪ್ರತಿಭಟನೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುವುದು. ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ.

ಬೆಂಗಳೂರು (ನ.14): ರಾಜ್ಯದಲ್ಲಿ ನವೆಂಬರ್ 20ರಂದು ಮದ್ಯಪ್ರಿಯರಿಗೆ ಎಣ್ಣೆಯೇ ಸಿಗುವುದಿಲ್ಲ. ಅಂದು ಗಾಂಧಿ ಜಯಂತಿಯೂ ಇಲ್ಲ, ಇತ್ತ ಚುನಾವಣೆಯ 144 ಸೆಕ್ಷನ್ ಕೂಡ ಜಾರಿಯಲ್ಲಿ ಇರುವುದಿಲ್ಲ. ಆದರೂ, ಇಡೀ ರಾಜ್ಯಾದ್ಯಂತ ಎಣ್ಣೆ ಮಾರಾಟವನ್ನು ಮದ್ಯ ಮಾರಾಟಗಾರರೇ ಸ್ಥಗಿತ ಮಾಡಲು ತೀರ್ಮಾನಿಸಿದ್ದಾರೆ.

ಹೌದು, ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನವೆಂಬರ್ 20ರ ಬುಧವಾರ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತಿದೆ ಎಂದು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಹೇಳಿದ್ದಾರೆ.

ಈ ಕುರಿತು ಗುರುವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ 20 ರಂದು ಸಮಸ್ಯೆಗಳಿಗೆ, ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಸಿಎಂ, ಅಬಕಾರಿ ಸಚಿವರು, ಮತ್ತು ಪೊಲೀಸರ ಜೊತೆ ನಮ್ಮ ಸಭೆ ಆಗಬೇಕು. ಅಬಕಾರಿ ಇಲಾಖೆಯಲ್ಲಿ  ಭ್ರಷ್ಟಾಚಾರ  ಮಿತಿ ಮೀರುತ್ತಿದೆ, ಇದನ್ನು ಸರಿಪಡಿಸಬೇಕೆಂಬುದು ನಮ್ಮ ಬೇಡಿಕೆ. ಅಕ್ಟೋಬರ್ 25 ರಂದು ನಡೆದ ಸಭೆಯಲ್ಲಿ ಲಂಚದ ಕಿರುಕುಳದ ವಿಚಾರ ಪ್ರಸ್ತಾಪ ಆಗಿತ್ತು. ಆ ಸಭೆಯಲ್ಲಿ ಲಂಚ ಸ್ವೀಕಾರದ ವಿಚಾರವನ್ನು ಬಹಿರಂಗ ಪಡಿಸಿದ್ದೇವೆ ಎಂದರು.

ಇದನ್ನೂ ಓದಿ: 700 ಕೋಟಿ ಅಬಕಾರಿ ಆರೋಪ ಸಾಬೀತಿಗೆ ಮೋದಿ ಸವಾಲ್‌: ಪ್ರಧಾನಿ ವಿರುದ್ಧ ಮುಗಿಬಿದ್ದ ಸಿದ್ದು, ಡಿಕೆಶಿ

ಅಬಕಾರಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಅಬಕಾರಿ ಇಲಾಖೆಯ ಉಸ್ತುವಾರಿಯನ್ನು ಆರ್ಥಿಕ ಸಚಿವರೇ ವಹಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ನಾವು 500-900 ಕೋಟಿ ಲಂಚದ ಬಗ್ಗೆ ಎಂದೂ ಮಾತಾಡಿಲ್ಲ. ಈ ರೀತಿಯ ತಪ್ಪು ಮಾಹಿತಿಯನ್ನು ಪ್ರಧಾನಿ ಅವರಿಗೆ ಯಾರು ತಿಳಿಸಿದ್ದಾರೆ ಎಂದು ನಮಗೆ ಗೊತ್ತಿಲ್ಲ. ಸತೀಶ್ ಜಾರಕಿ ಹೊಳಿ ಹೊರತುಪಡಿಸಿ ಎಲ್ಲಾ ಹಿಂದಿನ ಸಚಿವರು ಲಂಚ, ವಸೂಲಿ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಹೇಳಿದರು.

ಮದ್ಯ ಮಾರಾಟಗಾರರ ಬೇಡಿಕೆಗಳು
* ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20 ರಷ್ಟು ಲಾಭಾಂಶ ನೀಡಬೇಕು.
* ಸಿ.ಎಲ್- 2 ಗಳಲ್ಲಿ ಮದ್ಯ ಸೇವಿಸಲು ಅವಕಾಶ ಕೊಡಬೇಕು.
* ಸಿ.ಎಲ್- 9 ಗಳಲ್ಲಿ ಮಾತ್ರ ಹೆಚ್ಚುವರಿ ಕೌಂಟರ್ಗಳನ್ನು ಶುಲ್ಕ ವಿಧಿಸಿ ನೀಡಬೇಕು ಮತ್ತು ಮದ್ಯ - ಬಿಯರ್ ಪಾರ್ಸೆಲ್ ನೀಡಲು ಕಾನೂನು ತಿದ್ದುಪಡಿ ಮಾಡಬೇಕು.
* 2005 ನಲ್ಲಿ ತಿದ್ದುಪಡಿ ಆಗಿರುವ ಅಬಕಾರಿ ಕಾಯ್ದೆ ಕಲಂ 29 ನ್ನು ಪುನರ್ ವಿಮರ್ಶಿಸಿ ತಿದ್ದುಪಡಿ ಮಾಡಬೇಕು.
* ಸರ್ಕಾರಿ ಆದೇಶ ಸಂಖ್ಯೆ AE/36/EWP /2018 ಆಗಸ್ಟ್ 6 2020 ನ್ನು ರದ್ದುಗೊಳಿಸಬೇಕು
* ಆದೇಶ ಸಂಖ್ಯೆ HD 16 PES- 2017 ಜುಲೈ 5 2018 ಇದನ್ನು ಮಾರ್ಪಾಡು ಮಾಡಿ ರೂಂಗಳನ್ನು ಹೆಚ್ಚಳ ಮಾಡಬೇಕು.
* MSIL ಲೈಸೆನ್ಸ್ ಕುರಿತು ನ್ಯಾಯ ಸಮ್ಮತವಾದ ತೀರ್ಮಾನ ಕೈಗೊಳ್ಳಬೇಕು.
* ಮಿಲಿಟರಿ ಕ್ಯಾಂಟೀನ್ ಸ್ಟೋರ್,Duty free ಹೆಸರಿನಲ್ಲಿ ಬರುವ ನಕಲಿ ಮದ್ಯ, ಗೋವಾದಿಂದ ಬರುವ ಮದ್ಯ ಮತ್ತು ನಕಲಿ ಮದ್ಯ ತಯಾರಕರ ಕಳ್ಳಭಟ್ಟಿ ಕೇಂದ್ರಗಳ ಬಗ್ಗೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು.

ಇದನ್ನೂ ಓದಿ: ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್!

* CL8 ,CL8A, CL8B ಲೈಸೆನ್ಸ್ ಷರತ್ತುಗಳ ಪಾಲನೆಗೆ ಕ್ರಮಕಯಗೊಳ್ಳಬೇಕು.
* ಪೊಲೀಸ್ ಇಲಾಖೆಯ ಹಸ್ತಕ್ಷೇಪ ಮತ್ತು ಅನಗತ್ಯವಾಗಿ ಲೈಸೆನ್ಸ್ ಗಳನ್ನು ಬಂದ್ ಮಾಡುತ್ತುರಯವ ಕುರಿತು ಸರ್ಕಾರ ಮದ್ಯ ಪ್ರವೇಶಿಸಿ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು.
* ಸನ್ನದುದಾರರಿಗೆ ವಿಧಿಸುವ ಸಾಮಾನ್ಯ ಮೊಕದ್ದಮೆಗಳಿಗೆ ರಾಜಿ‌ ಮೂಲಕ ವಿಧಿಸುವ ದಂಡನೆ ಕಡಿಮೆ ಮಾಡಿ ಲೈಸೆನ್ಸ್ ರಹಿತವಾಗಿ ಮದ್ಯ ಮಾರಾಟ ಮಾಡುವವರ ದಂಡನೆ ಹೆಚ್ಚಳ ಮಾಡಬೇಕು.
* ಡಾಬಾ, ಮಾಂಸಹಾರ ಹೋಟೆಲ್, ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುವುದನ್ನ ನಿಯಂತ್ರಿಸಲು ಕಠಿಣ ಕ್ರಮ ಕಾನೂನು ಕ್ರಮ ಕೈಗೊಳ್ಳಬೇಕು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!