ಕರ್ನಾಟಕದಲ್ಲಿ ಹೆಚ್ಚಾದ ನಕಲಿ ಮದ್ಯ ಮಾರಾಟ

Published : Aug 20, 2023, 12:02 AM IST
ಕರ್ನಾಟಕದಲ್ಲಿ ಹೆಚ್ಚಾದ ನಕಲಿ ಮದ್ಯ ಮಾರಾಟ

ಸಾರಾಂಶ

ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಸುಂಕದಲ್ಲಿ ಬಿಯರ್‌ಗೆ ಶೇ.10 ಹಾಗೂ ಉಳಿದ ಮದ್ಯಕ್ಕೆ ಶೇ.20ರಷ್ಟುಸುಂಕ ಹೆಚ್ಚಿಸಲಾಗಿದೆ. ಅದರಂತೆ ಕಳೆದ ತಿಂಗಳಿಂದ ಮದ್ಯದ ಬೆಲೆ ಹೆಚ್ಚಾಗಿದೆ. ಹೀಗಾಗಿ ಆಗಸ್ಟ್‌ ತಿಂಗಳಲ್ಲಿ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ. ಕೇವಲ 15 ದಿನಗಳಲ್ಲೇ ಬಿಯರ್‌ ಹೊರತುಪಡಿಸಿ ಉಳಿದ ಮದ್ಯದ ಮಾರಾಟ ಪ್ರಮಾಣ ಕಳೆದ ವರ್ಷಕ್ಕಿಂತ ಶೇ.14.25ರಷ್ಟು ಕುಸಿತ ಕಂಡಿದೆ.

ಬೆಂಗಳೂರು(ಆ.20): ಮದ್ಯದ ದರ ಏರಿಕೆಯಿಂದಾಗಿ ರಾಜ್ಯದಲ್ಲಿ ಮದ್ಯ ಮಾರಾಟದಲ್ಲಿ ಕುಂಠಿತವಾಗಿದ್ದು, ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಶೇ.10ರಿಂದ 15ರಷ್ಟು ಕಡಿಮೆ ಪ್ರಮಾಣದ ಮದ್ಯ ಮಾರಾಟವಾಗಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ತಿಳಿಸಿದೆ.

ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಸುಂಕದಲ್ಲಿ ಬಿಯರ್‌ಗೆ ಶೇ.10 ಹಾಗೂ ಉಳಿದ ಮದ್ಯಕ್ಕೆ ಶೇ.20ರಷ್ಟುಸುಂಕ ಹೆಚ್ಚಿಸಲಾಗಿದೆ. ಅದರಂತೆ ಕಳೆದ ತಿಂಗಳಿಂದ ಮದ್ಯದ ಬೆಲೆ ಹೆಚ್ಚಾಗಿದೆ. ಹೀಗಾಗಿ ಆಗಸ್ಟ್‌ ತಿಂಗಳಲ್ಲಿ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡಿದೆ. ಕೇವಲ 15 ದಿನಗಳಲ್ಲೇ ಬಿಯರ್‌ ಹೊರತುಪಡಿಸಿ ಉಳಿದ ಮದ್ಯದ ಮಾರಾಟ ಪ್ರಮಾಣ ಕಳೆದ ವರ್ಷಕ್ಕಿಂತ ಶೇ.14.25ರಷ್ಟು ಕುಸಿತ ಕಂಡಿದೆ.

ಮದ್ಯ ಪ್ರಿಯರೇ ಇಲ್ನೋಡಿ: ನಿಮ್ಮಿಷ್ಟದ ವಿಸ್ಕಿಯ ಟೇಸ್ಟ್‌ ಮತ್ತಷ್ಟು ಹೆಚ್ಚಿಸಿಕೊಳ್ಳೋಕೆ ಈ ಸ್ನ್ಯಾಕ್ಸ್‌ ಬೆಸ್ಟ್‌ ಕಾಂಬಿನೇಷನ್‌!

ಒಕ್ಕೂಟ ನೀಡಿರುವ ಮಾಹಿತಿಯಂತೆ ಜುಲೈ ತಿಂಗಳಲ್ಲಿ 3,556.25 ಕೋಟಿ ರು. ಮೊತ್ತದ ಬಿಯರ್‌ ಸೇರಿದಂತೆ ಎಲ್ಲ ಬಗೆಯ ಮದ್ಯಗಳು ಮಾರಾಟವಾಗಿದ್ದವು. ಅದೇ ಆಗಸ್ಟ್‌ ತಿಂಗಳ 15 ದಿನಗಳಲ್ಲಿ 1,302.90 ಕೋಟಿ ರು. ಮದ್ಯ ಮಾರಾಟವಾಗಿದೆ. ಅದರಲ್ಲಿ ಬಿಯರ್‌ 234.19 ಕೋಟಿ ರು. ಹಾಗೂ ಇತರ ಮದ್ಯ 1,068.71 ಕೋಟಿ ರು. ಮಾರಾಟವಾಗಿದೆ.

2022-23ರಲ್ಲಿ ಆಗಸ್ಟ್‌ನ ಮೊದಲ 15 ದಿನಗಳ ಕಾಲ 25.80 ಲಕ್ಷ ಬಾಕ್ಸ್‌ಗಳಷ್ಟುಮದ್ಯ ಹಾಗೂ 10.34 ಲಕ್ಷ ಬಾಕ್ಸ್‌ ಬಿಯರ್‌ ಮಾರಾಟವಾಗಿತ್ತು. ಅದೇ ಈ ವರ್ಷದ ಆಗಸ್ಟ್‌ 1ರಿಂದ 15ರವರೆಗೆ 21.87 ಲಕ್ಷ ಬಾಕ್ಸ್‌ ಮದ್ಯ ಹಾಗೂ 12.52 ಲಕ್ಷ ಬಾಕ್ಸ್‌ ಬಿಯರ್‌ ಮಾರಾಟವಾಗಿದೆ. ಈ ಲೆಕ್ಕದಂತೆ ಬಿಯರ್‌ ಮಾರಾಟದ ಪ್ರಮಾಣ ಹೆಚ್ಚಾಗಿದ್ದರೆ, ಇತರ ಮದ್ಯದ ಮಾರಾಟ ಪ್ರಮಾಣ ಶೇ.14.25ರಷ್ಟುಕುಸಿತ ಕಂಡಿದೆ. ಅಲ್ಲದೆ, ಸ್ಕಾಚ್‌ ಮದ್ಯ ಕುಡಿಯುತ್ತಿದ್ದವರು ಪ್ರೀಮಿಯಂ ಬ್ರ್ಯಾಂಡ್‌ಗೆ ಹಾಗೂ ಪ್ರೀಮಿಯಂ ಬ್ರ್ಯಾಂಡ್‌ ಸೇವಿಸುತ್ತಿರುವವರು ಅದಕ್ಕಿಂತ ಕೆಳಗಿನ ಬ್ರ್ಯಾಂಡ್‌ ಸೇವಿಸುತ್ತಿದ್ದಾರೆ.

ಮದ್ಯ ಮಾರಾಟದ ಪ್ರಮಾಣದಲ್ಲಿ ಇಳಿಕೆಯ ಜತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಕಲಿ ಮದ್ಯ ಮಾರಾಟವೂ ಹೆಚ್ಚಾಗಿದೆ. ಅದರಲ್ಲೂ ತೆಲಂಗಾಣ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಲೇಬಲ್‌ ಇರುವ ನಕಲಿ ಮದ್ಯಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ನಕಲಿ ಮದ್ಯ ಮಾರಾಟ ತಡೆಗೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒಕ್ಕೂಟದ ಅಧ್ಯಕ್ಷ ಎಸ್‌.ಗುರುಸ್ವಾಮಿ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ