
ಬೆಂಗಳೂರು[ಜ.08]: ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಮಂಗಳವಾರದಿಂದ ಎರಡು ದಿನ ನಡೆಸಲಿರುವ ದೇಶವ್ಯಾಪಿ ಭಾರತ್ ಬಂದ್ಗೆ ರಾಜ್ಯದ ಹಲವು ಸಂಘಟನೆಗಳು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಬೆಂಬಲ ವ್ಯಕ್ತಪಡಿಸಿವೆ. ಹೀಗಿರುವಾಗ ಶಾಲಾ ಕಾಲೇಜುಗಳು ತೆರೆಯುತ್ತವಾ? ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾ? ಎಂಬ ಗೊಂದಲದಲ್ಲಿದ್ದಾರೆ. ಈಗಾಗಲೇ ಕೆಲ ಜಿಲ್ಲಾಧಿಕಾರಿಗಳು ಅಧಿಕೃತವಾಗಿ ರಜೆ ಘೋಷಿಸಿದ್ದಾರೆ. ಹಾಗಿದ್ದರೆ ರಾಜ್ಯದ ಯಾವೆಲ್ಲ ಜಿಲ್ಲೆಗಳಲ್ಲಿ ಡಿಸಿಗಳು ಅಧಿಕೃತ ರಜೆ ಘೋಷಿಸಿವೆ? ಇಲ್ಲಿದೆ ಪಟ್ಟಿ
ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲೆಗಳ ಪಟ್ಟಿ.
ಬೆಂಗಳೂರು ನಗರ
ಮಂಡ್ಯ
ತುಮಕೂರು
ಉತ್ತರ ಕನ್ನಡ
ಚಿಕ್ಕಬಳ್ಳಾಪುರ
ದಾವಣಗೆರೆ
ಕೊಪ್ಪಳ
ಕೋಲಾರ
ಮೈಸೂರು
ಬಳ್ಳಾರಿ
ಧಾರವಾಡ
ಚಾಮರಾಜನಗರ
ರಾಯಚೂರು
ಗದಗ
ದಕ್ಷಿಣ ಕನ್ನಡ
ಚಿತ್ರದುರ್ಗ
ಉಡುಪಿ
ಹೀಗಿದ್ದರೂ ಕೆಲ ಜಿಲ್ಲಾಧಿಕಾರಿಗಳು ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡಲಿದ್ದಾರೆ. ಶಾಲಾ ಕಾಲೇಜುಗಳಿಗೆ ಅಧಿಕೃತ ರಜೆ ಘೋಷಿಸದ ಜಿಲ್ಲೆಗಳು.
ಮಡಿಕೇರಿ
ಶಿವಮೊಗ್ಗ
ಚಿಕ್ಕಮಗಳೂರು
ಇನ್ನು ಮಕ್ಕಳು ಭಾರತ್ ಬಂದ್ ಪ್ರಯುಕ್ತ ರಜೆ ಸಿಕ್ಕಿದೆ ಎಂದು ಖುಷಿ ಪಡುವತ್ಲಿಲ. ಯಾಕೆಂದರೆ ಜಿಲ್ಲಾಧಿಕಾರಿಗಳು ಎರಡು ದಿನದ ತರಗತಿಗಳನ್ನು ಶನಿವಾರ ಹಾಗೂ ಭಾನುವಾರದಂದು ನಡೆಸಬೇಕೆಂದು ಶಾಲಾ ಕಾಲೇಜುಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ