
ಬೆಂಗಳೂರು (ಏ.4): ಅಜ್ಜಿ, ಮಗಳು ಮತ್ತು ಮೊಮ್ಮಗಳ ಕೃತಿಗಳು ಒಂದೇ ವೇದಿಕೆಯಲ್ಲಿ ಲೋಕಾರ್ಪಣೆಗೊಳ್ಳುವ ಅಪರೂಪದ ಸನ್ನಿವೇಶಕ್ಕೆ ಭಾನುವಾರ ಅರಮನೆ ರಸ್ತೆಯ ಕೊಂಡಜ್ಜಿ ಬಸಪ್ಪ ಸಭಾಭವನ ಸಾಕ್ಷಿಯಾಗಲಿದೆ.
ಭಾನುವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾರತಿ ವಸ್ತ್ರದ ಅವರ ‘ಚೇತನ ಭಾರತಿ’, ಪತ್ರಕರ್ತೆ ರಶ್ಮಿ ಎಸ್. ಅವರ ‘ಮಿದು ಮಾತು’ ಮತ್ತು ಅರ್ನಿ ಸಿ.ನವೀನ್ ಅವರ ‘ಎಕೋಸ್ ಫ್ರಂ ಮೈ ಜಾರ್’ ಕೃತಿಗಳ ಲೋಕಾರ್ಪಣೆಯಾಗಲಿದೆ.
ಅಲಮೇಲದ ಬೆರಗು ಪ್ರಕಾಶನದಿಂದ ಕಾರ್ಯಕ್ರಮ ಆಯೋಜಿಸಿದ್ದು, ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಅವರು ಉದ್ಘಾಟಿಸಲಿದ್ದಾರೆ. ಅಂಕಣಕಾರ ಎನ್.ರವಿಶಂಕರ್ ಅವರು ಕೃತಿ ಪರಿಚಯ ಮಾಡಿಕೊಟ್ಟು ಸಂವಾದ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ