
ಬೆಂಗಳೂರು (ಸೆ.9) : ಭಗವಾನ್ ಬುದ್ಧರ ಜಯಂತಿಯನ್ನು ಕರ್ನಾಟಕದ ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರಿಸಬೇಕೆಂದು ಡಾ.ದೇವನೂರು ಮಹಾದೇವ ಸೇರಿದಂತೆ ಸುಮಾರು 30 ಮಂದಿ ಸಾಹಿತಿಗಳು, ವಿಚಾರವಾದಿಗಳು, ಪ್ರಜ್ಞಾವಂತರು ಗಣ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಮಹಾವೀರ, ಕನಕದಾಸರು ಸೇರಿದಂತೆ ಅನೇಕ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದೆ. ಆದರೆ, ಬುದ್ಧ ಜಯಂತಿ(Buddha Jayanti)ಯನ್ನು ರಾಷ್ಟ್ರೀಯ ಹಬ್ಬ(National festival list)ದ ಪಟ್ಟಿಗೆ ಸೇರಿಸದಿರುವುದು ಆಶ್ಚರ್ಯಕರವಾಗಿದೆ. ಇಂದಿನ ವಿಷಯ ಪರಿಸ್ಥಿತಿಯಲ್ಲಿ ಬುದ್ಧಜಯಂತಿಯ ಆಚರಣೆಯು ಸಹಿಷ್ಣತೆ ಭ್ರಾತೃತ್ವ ಸಮ ಸಮಾಜದ ನಿರ್ಮಾಣ, ಶಾಂತಿ, ಸೌಹಾರ್ದತೆ ಬೆಳೆಸಲು ಸಹಕಾರಿಯಾಗುತ್ತದೆ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ